ಹಬ್ಬದ ಹೆಸರಲ್ಲಿ ಲೂಟಿ ಮಾಡುವ Travel Appಗಳ ವಿರುದ್ಧ ಹಿಂದು ಸಂಘಟನೆ ಆಕ್ರೋಶ

Bus Charge Increase : ಹಬ್ಬಗಳ ಟೈಮಲ್ಲಿ ಬಸ್‌ ಪ್ರಯಾಣ ದರ ಏರಿಸುವ ಟ್ರಾವೆಲ್‌ ಆಪ್‌ಗಳ ವಿರುದ್ಧ ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರು ಮಾರ್ಚ್‌ 14 : ಹಿಂದೂ ಹಬ್ಬಗಳ (Hindu Festivals) ಸಂದರ್ಭದಲ್ಲಿ ಬಸ್‌ ಪ್ರಯಾಣ ದರವನ್ನು (Bus charge Increase) ವಿಪರೀತ ಹೆಚ್ಚಿಸುವ ಟ್ರಾವೆಲ್‌ ಆ್ಯಪ್‌ಗಳ (Travel Apps) ವಿರುದ್ಧ ಹಿಂದೂ ಜನಜಾಗೃತಿ ಸಮಿತಿ (Hindu Jana Jagruti Samithi) ಆಕ್ರೋಶ ವ್ಯಕ್ತಪಡಿಸಿದೆ.

‘ಮೇಕ್ ಮೈ ಟ್ರಿಪ್’, ‘ರೆಡ್ ಬಸ್’, ‘ಗೋಯಿಬಿಬೋ’, ‘ಸವಾರಿ’, ‘ಇನ್ ಡ್ರೈವ್’, ‘ರ‍್ಯಾಪಿಡೊ’, ‘ಕ್ವಿಕ್ ರೈಡ್’, ನಂತಹ 18 ಖಾಸಗಿ ಪ್ರವಾಸಿ ಆ್ಯಪ್‌ಗಳು ಕೇಂದ್ರ ಸರಕಾರದ ಅನುಮತಿ ಪಡೆಯದೆ ಅಗ್ರಿಗೇಟರ್‌ನ ವ್ಯವಹಾರ ನಡೆಸುತ್ತಿವೆ. ಅವುಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ದ ವತಿಯಿಂದ ಮಾನ್ಯ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ (RamaLinga Reddy) ಅವರಿಗೆ ಮನವಿ ನೀಡಲಾಯಿತು.

ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ, ಶಿವರಾಮ್, ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಪರಿಷತ್‌ನ ರಾಷ್ಟ್ರೀಯ ಕಾರ್ಯದರ್ಶಿಗಳಾದ ಡಾ. ಬಿ.ಎನ್. ಮಹೇಶ್ ಕುಮಾರ, ಕಾರ್ಮಿಕ ಪ್ರತಿಷ್ಠಾನದ ಮಲ್ಲಿಕಾರ್ಜುನ್, ನ್ಯಾಯವಾದಿ ಶಕುಂತಲಾ ಶೆಟ್ಟಿ, ಯುವ ಮುಖಂಡ ವಿನಯ್ ಹಾಗೂ ರಘುನಾಥ್ ನಾವಡ ಮತ್ತಿತರರು ಉಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಮೋಹನ್ ಗೌಡ, ಸಮಿತಿಯ ಸುರಾಜ್ಯ ಅಭಿಯಾನದ ವತಿಯಿಂದ ಈಗಾಗಲೇ ಮಹಾರಾಷ್ಟ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬೆಂಬತ್ತುವಿಕೆ ಮಾಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿರುವ ಈ ಟ್ರಾವೆಲ್ ಆ್ಯಪ್‌ಗಳು ಮತ್ತು ಟ್ರಾವೆಲ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅನೇಕ ಆಂದೋಲನಗಳು ನಡೆಸಿದ್ದೇವೆ. ಅದರ ಫಲವಾಗಿ ಅಲ್ಲಿನ ಸರಕಾರ ಕೇವಲ ಅಪ್ಲಿಕೇಶನ್ ಅನ್ನು ಮುಚ್ಚುವ ಅಧಿಸೂಚನೆಯನ್ನು ನೀಡಲಾಗಿದೆ. ಕೋಟಿಗಟ್ಟಲೆ ಪ್ರಯಾಣಿಕರನ್ನು ಲೂಟಿ ಮಾಡುತ್ತಿರುವ ಈ ಅಕ್ರಮ ಅಗ್ರಿಗೇಟರ್ ಆ್ಯಪ್ ವಿರುದ್ಧ ಈ ಕ್ರಮ ಸಾಕಾಗುವುದಿಲ್ಲ ಎಂದು ಹೇಳಿದರು.