ಅಬ್ಬರದ ಮಳೆಗೆ ಕೊಚ್ಚಿಹೋದ ಸೇತುವೆ

ಯಲ್ಲಾಪುರ: ತಾಲೂಕಿನಲ್ಲಿ ಮಂಗಳವಾರವೂ ಮಳೆಯ ಅಬ್ಬರ ಮುಂದುವರಿದಿದೆ. ಜೋರಾದ ಮಳೆಯ ಪರಿಣಾಮ ಹಳ್ಳಗಳು ತುಂಬಿ ಹರಿಯುತ್ತಿವೆ. ಹಿತ್ಲಳ್ಳಿ ಗ್ರಾ.ಪಂ ಇಳೆಹಳ್ಳಿ ಗ್ರಾಮದ ದೇವಾಸಗದ್ದೆ ಬಳಿ ಸೇತುವೆಯೊಂದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ದೇವಾಸಗದ್ದೆ – ಇಳೆಹಳ್ಳಿ ಸಂಪರ್ಕ ಕಡಿತಗೊಂಡಿದೆ.