‘ಕಣ್ಣೇ ಅದಿರಿಂದಿ’ ಖ್ಯಾತಿಯ ಗಾಯಕಿ ಮಂಗ್ಲಿ ಕಾರು ಅಪಘಾತ

Singer Mangli: ಮಂಗ್ಲಿ ಮತ್ತು ಇತರ ಇಬ್ಬರು ಪ್ರಯಾಣಿಕರಾದ ಮೇಘರಾಜ್ ಮತ್ತು ಮನೋಹರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಸಮಯದಲ್ಲಿ ಸಣ್ಣ ಟ್ರಕ್ ಚಾಲಕ (DCM driver) ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ.

ಬೆಂಗಳೂರು ಮಾರ್ಚ್‌ 18 : ಗಾಯಕಿ ಸತ್ಯವತಿ ರಾಥೋಡ್ ಮಂಗ್ಲಿʼ (Singer Mangli ) ಎಂದು ಜನಪ್ರಿಯರಾಗಿದ್ದಾರೆ. ಭಾನುವಾರ ರಾತ್ರಿ (ಮಾ.17) ಶಂಶಾಬಾದ್‌ನ ತೊಂಡಪಲ್ಲಿ ಬಳಿ ಕಾರು ಅಪಘಾತಕ್ಕೆ ಒಳಗಾಗಿ ಮಂಗ್ಲಿ ಗಾಯಗೊಂಡಿದ್ದಾರೆ. ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತೊಂಡುಪಲ್ಲಿ ಸೇತುವೆ ಬಳಿ ಈ ಘಟನೆ ಸಂಭವಿಸಿದೆ. ಶಂಶಾಬಾದ್ ಪೊಲೀಸರ ಪ್ರಕಾರ, ಶನಿವಾರ ರಾತ್ರಿ (ಮಾ.16)ಮಂಗ್ಲಿʼ ಅವರು ನಂದಿ ಗ್ರಾಮದಿಂದ ಮನೆಗೆ ಮರಳುತ್ತಿದ್ದಾಗ ತೊಂಡುಪಲ್ಲಿ ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ. ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಮಂಗ್ಲಿ ಕಾರಿಗೆ ಸಣ್ಣ ಟ್ರಕ್ (DCM driver)) ಗುದ್ದಿದೆ ಎಂದು ಹೇಳಿದ್ದಾರೆ.

ಮಂಗ್ಲಿ ಮತ್ತು ಇತರ ಇಬ್ಬರು ಪ್ರಯಾಣಿಕರಾದ ಮೇಘರಾಜ್ ಮತ್ತು ಮನೋಹರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಸಮಯದಲ್ಲಿ ಸಣ್ಣ ಟ್ರಕ್ ಚಾಲಕ (DCM driver) ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎನ್ನಲಾಗಿದೆ. ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದು ಇನ್ನಷ್ಟು ಮಾಹಿತಿ ಬರಬೇಕಿದೆ.

ಅಪಘಾತ ಸುದ್ದಿ ವೈರಲ್‌ ಆಗುತ್ತಿದ್ದಂತೆ ಮಂಗ್ಲಿ ಫ್ಯಾನ್ಸ್‌ ಗಾಬರಿಯಾಗಿದ್ದರು. ಇದೀಗ ಅಭಿಮಾನಿಗಳು ಮತ್ತು ಕುಟುಂಬ ಸದಸ್ಯರು ನಿಟ್ಟುಸಿರು ಬಿಟ್ಟಿದ್ದಾರೆ.

`ಕಣ್ಣೇ ಅದಿರಿಂದಿ’ ಹಾಡಿನ ಮೂಲಕ ಗಮನಸೆಳೆದು, ಅಪಾರ ಖ್ಯಾತಿ ಗಳಿಸಿಕೊಂಡ ತೆಲುಗಿನ ಗಾಯಕಿ ಮಂಗ್ಲಿ. ಆ ನಂತರ ಕನ್ನಡದಲ್ಲೂ ಹಲವು ಹಾಡುಗಳಿಗೆ ದನಿಯಾಗಿರುವ ಮಂಗ್ಲಿ ಕನ್ನಡಿಗರ ಪ್ರೀತಿಗೂ ಪಾತ್ರರಾಗಿದ್ದಾರೆ. ಚಕ್ರವರ್ತಿ ಚಂದ್ರಚೂಡ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ‘ಪಾದರಾಯ’ ಚಿತ್ರಕ್ಕೆ ಮಂಗ್ಲಿ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ʻಪುಷ್ಪ’ ಚಿತ್ರದ ಕನ್ನಡ ವರ್ಷನ್​ನಲ್ಲಿ ಬರುವ ‘ಹೂ ಅಂತೀಯಾ ಮಾವ..’ ಹಾಡನ್ನು ಹಾಡಿ ಗಮನ ಸೆಳೆದರು.