ಬಸ್ ತಪ್ಪಿಸಲು ಹೋಗಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಪಲ್ಟಿ

ಭಟ್ಕಳ: ಕೆ.ಎಸ್.ಆರ್.ಟಿ.ಸಿ ಬಸ್ ತಪ್ಪಿಸಲು ಹೋಗಿ ಲಾರಿ ಪಲ್ಟಿಯಾಗಿರುವ ಘಟನೆ ಮೂಡಭಟ್ಕಳ ಟಾಪ್ ಲಾಡ್ಜ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಾತ್ರಿ ಸುರಿದ ಮಳೆಯಲ್ಲಿ ಸಂಚರಿಸುವಾಗ ಕೆ.ಎಸ್ ಆರ್ ಟಿಸಿ ಬಸ್ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಚಾಲಕ ಮಾರುತಿ ತಿಪ್ಪಣ್ಣ ವಡ್ಡರ ಅಸ್ತವ್ಯಸ್ತಗೊಂಡಿದ್ದು, ಕ್ಲೀನರ್ ಮನೋಜ್ ಮಲಕಪ್ಪ ಅಪಾಯದಿಂದ ಪಾರಾಗಿದ್ದಾರೆ. ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ 112 ವಾಹನ ಹಾಗೂ ಹೈವೇ ಪೆಟ್ರೋಲಿಂಗ್ ಪೊಲೀಸ್ ವಾಹನ ತೆರಳಿ ಗಾಯಾಳು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಿದ್ದಾರೆ.