ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಕಾಂಗ್ರೆಸ್ ಪಾದಯಾತ್ರೆ

ಸಿದ್ದಾಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಾಂಗ್ರೆಸ್ ವತಿಯಿಂದ ತಾಲೂಕಿನ ಬೇಡ್ಕಣಿಯಲ್ಲಿ ಮಂಗಳವಾರ ಪಾದಯಾತ್ರೆ ನಡೆಯಿತು. ಸ್ವಾತಂತ್ರ‍್ಯ ಹೋರಾಟದಲ್ಲಿ ಪಾಲ್ಗೊಂಡ ಜಿಲ್ಲೆಯ ಮೊದಲ ಖೈದಿ ಚೌಡಾ ನಾಯ್ಕರ ಊರಾದ ಬೇಡ್ಕಣಿಯಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಎಡಬಿಡದೇ ಸುರಿಯುತ್ತಿರುವ ಮಳೆಯಲ್ಲೂ ಕೋಟೆ ಆಂಜನೇಯ ದೇವಾಲಯದ ಸಭಾಭವನದಲ್ಲಿ ವಂದೇ ಮಾತರಂ ಗೀತೆಯೊಂದಿಗೆ ಪಾದಯಾತ್ರೆ ಪ್ರಾರಂಭಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಸೇರಿದಂತೆ ನೂರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು. ಬೇಡ್ಕಣಿಯಿಂದ ಪ್ರಾರಂಭವಾದ ಪಾದಯಾತ್ರೆ ತ್ಯಾರ್ಸಿ, ಕಡಕೇರಿ, ಕಾನಳ್ಳಿ, ಕೋಲಸಿರ್ಸಿ, ಅವರಗುಪ್ಪಾ ಮೂಲಕ ಪಟ್ಟಣ ತಲುಪಿತು.