ಶಾಲಾ ಶತಮಾನೋತ್ಸವ ಪ್ರಯುಕ್ತ ಗಿಡ ನೆಡುವ ಅಭಿಯಾನ

ಯಲ್ಲಾಪುರ: ತಾಲೂಕಿನ ನಂದೊಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶತಮಾನೋತ್ಸವದ ಪ್ರಯುಕ್ತ 100 ಗಿಡ ನೆಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಹಿರಿಯರಾದ ತಿಮ್ಮಣ್ಣ ಭಾಗ್ವತ ವೃಕ್ಷಾರೋಪಣ ನೆರವೇರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಶಾರದಾ ಪೂಜೆಯೊಂದಿಗೆ ಶತಮಾನೋತ್ಸವದ ಸಂಭ್ರಮಕ್ಕೆ ಚಾಲನೆ ನೀಡಲಾಯಿತು.

ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಹಿರಿಯರಾದ ಅನಂತ ಹೆಗಡೆ ಗೌರವಿಸಲಾಯಿತು. ಗ್ರಾ.ಪಂ ಅಧ್ಯಕ್ಷ ನರಸಿಂಹ ಕೋಣೆಮನೆ, ಸದಸ್ಯರಾದ ಟಿ.ಆರ್.ಹೆಗಡೆ, ನಾಗರತ್ನಾ ನಾಯ್ಕ, ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಾಯಕ ಭಟ್ಟ ಹಾಗೂ ಇತರರು ಉಪಸ್ಥಿತರಿದ್ದರು.