ಅನಂತ್‌ ಕುಮಾರ್‌ ಹೆಗಡೆ ಸಲಹೆ ಸೂಚನೆ ಕೇಳುತ್ತೇನೆ – ವಿಶ್ವೇಶ್ವರ ಹೆಗಡೆ ಕಾಗೇರಿ

ಅನಂತ ಕುಮಾರ್ ಹೆಗಡೆ ಮತ್ತು ತಾನು ಜೊತೆಯಾಗಿ ಕೆಲಸ ಮಾಡುತ್ತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಎಲ್ಲರಿಗೂ ತಲುಪಿಸಿದ್ದೇವೆ. ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅವರಿಗೆ ಅಪಾರವಾದ ಅನುಭವ ಇದೆ. ಅವರ ಸಲಹೆ ಸೂಚನೆ ಕೇಳುವುದಾಗಿ ಕಾಗೇರಿ ಹೇಳಿದ್ದಾರೆ.

ಕಾರವಾರ, ಮಾರ್ಚ್‌ 25 : ಬಿಜೆಪಿ ವರಿಷ್ಠರಾದ ಜೆಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬೇರೆ ಎಲ್ಲ ನಾಯಕರು ತನ್ನ ಮೇಲೆ ವಿಶ್ವಾಸವಿಟ್ಟು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹಾಲಿ ಶಾಸಕ ಅನಂತಕುಮಾರ್ ಹೆಗಡೆ ಬದಲಿಗೆ ಟಿಕೆಟ್ ಗಿಟ್ಟಿಸಿರುವ ಹಿರಿಯ ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಸುದೀರ್ಘ ರಾಜಕೀಯ ಅನುಭವದ ಹಿನ್ನೆಲೆಯಲ್ಲಿ ತನಗೆ ಟಿಕೆಟ್ ಸಿಕ್ಕಿದೆ. ದೇಶಕ್ಕಾಗಿ ಅದ್ಭುತವಾವ ಸಾಧನೆಗಳನ್ನು ಮಾಡಿರುವ ಪ್ರಧಾನಿ ಮೋದಿಯರವ ಜೊತೆ ಕೆಲಸ ಮಾಡುವ ಸೌಭಾಗ್ಯ ತನಗೆ ಸಿಕ್ಕಿದೆ. ಅವರ ಸಾಧನೆಗಳು ಜನಸಾಮಾನ್ಯರಿಗೂ ತಲುಪಿವೆ. ಹೀಗಾಗಿ ದಾಖಲೆ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸವಿದೆ. ಮತ್ತು ಈ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಅದೇ ವೇಗದಲ್ಲಿ ಮುಂದುವರಿಯಲಿವೆ ಎಂದು ಕಾಗೇರಿ ಹೇಳಿದ್ದಾರೆ.

ಅನಂತ ಕುಮಾರ್ ಹೆಗಡೆ ಮತ್ತು ತಾನು ಜೊತೆಯಾಗಿ ಕೆಲಸ ಮಾಡುತ್ತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಎಲ್ಲರಿಗೂ ತಲುಪಿಸಿದ್ದೇವೆ. ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಅವರಿಗೆ ಅಪಾರವಾದ ಅನುಭವ ಇದೆ. ಅವರ ಸಲಹೆ ಸೂಚನೆ ಕೇಳುವುದಾಗಿ ಕಾಗೇರಿ ಹೇಳಿದ್ದಾರೆ…