ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡಿದ ಭಟ್ಕಳದ ಆನಂದ ಆಶ್ರಮ ಕಾಲೇಜು ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳದ ಆನಂದ ಆಶ್ರಮ ಕಾಲೇಜು ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿ, ಜಿಲ್ಲೆಗೆ ಕೀರ್ತಿ ತಂದಿದ್ದಾರೆ…

ಭಟ್ಕಳ, ಏಪ್ರಿಲ್‌ 10 : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಭಟ್ಕಳದ ಆನಂದ ಆಶ್ರಮ ಕಾಲೇಜು ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸುಮಿತ್ರಾ ದಿನೇಶ್ ನಾಯಕ 600ಕ್ಕೆ 585 ಅಂಕಗಳನ್ನು ಪಡೆದು  97.5‌% ಮತ್ತು ವಾಣಿಜ್ಯ ವಿಭಾಗದಲ್ಲಿ 572 ಅಂಕಗಳನ್ನು ಸಂಪಾದಿಸಿರುವ ಆಲ್ಫಿದಾ 95.33 ಪರ್ಸೆಂಟ್‌ ಮಾಡಿ  ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ…

V2 : ಇನ್ನು ಇದೇ ಕಾಲೇಜಿನಲ್ಲಿದ್ದ 44 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇಂಟ್ರಸ್ಟಿಂಗ್‌ ವಿಷ್ಯ ಏನಂದ್ರೆ 43 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು 22 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಪಾಸಾಗಿದ್ರೆ, 18 ಮಂದಿ ಫಸ್ಟ್‌ ಕ್ಲಾಸ್‌ನಲ್ಲಿ ಪಾಸಾಗಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ 37ಕ್ಕೆ 37 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 100ಕ್ಕೆ 100 ಪ್ರತಿಶತ ಫಲಿತಾಂಶ ಬಂದಿದೆ… ಮಕ್ಕಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಸಂತಸ ವ್ಯಕ್ತಪಡಿಸಿದೆ. ಮತ್ತೊಂದೆಡೆ ವಿದ್ಯಾರ್ಥಿಗಳ ಪೋಷಕರು ಆನಂದ ಆಶ್ರಮ ಕಾಲೇಜಿನ ಗುಣಮಟ್ಟದ ಶಿಕ್ಷಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ…