ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ ಹೋದ ಕಾಗೇರಿ

ಕಾರವಾರ, ಏಪ್ರಿಲ್‌ 12 : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ್‌ ಹೆಗಡೆ ಕಾಗೇರಿ, ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಮೊರೆ ಹೋಗಿದ್ದಾರೆ. ಕಾರವಾರದ ಟ್ಯಾಗೋರ್‌ ಕಡಲ ತೀರದಲ್ಲಿ ಸಮುದ್ರ ಪೂಜೆ ಸಲ್ಲಿಸಿದ್ರು.

ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆಗೂ ಮುನ್ನ ಸಿದ್ದಿವಿನಾಯಕ ದೇವಸ್ಥಾನ, ಮಾಲಾದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಮುದ್ರಕ್ಕೆ ಪೂಜೆ ಸಲ್ಲಿಸಿದ್ರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಕಾಗೇರಿ, ಬಿಜೆಪಿ ಶಕ್ತಿಶಾಲಿಯಾಗಿದೆ. ಕಾರ್ಯಕರ್ತರ ಪಡೆ ಗಟ್ಟಿಯಾಗಿದೆ. ಕಾಂಗ್ರೆಸ್‌ ಜನರಿಗೆ ಆಮಿಷವೊಡ್ಡುವ ಸಾಧ್ಯತೆ ಇದೆ. ಮತದಾರರು ಎಚ್ಚರದಿಂದ ಇರಬೇಕು ಎಂದರು.

ಈ ವೇಳೆ ರಾಜ್ಯ ಬಿಜೆಪಿ ಉಪಾದ್ಯಕ್ಷರಾದ ರೂಪಾಲಿ ನಾಯ್ಕ, ಲೋಕಸಭಾ ಕ್ಷೇತ್ರದ ಉಸ್ತುವಾರಿ ಹರತಾಳ‌ ಹಾಲಪ್ಪ, ಶಾಸಕ ಅರವಿಂದ ಬೆಲ್ಲದ, ವಿಧಾನಪರಿಷತ್‌ ಶಾಸಕ ಗಣಪತಿ ಉಳ್ವೇಕರ, ಎಸ್.ವಿ.ಸಂಕನೂರ ಉಪಸ್ಥಿತರಿದ್ರು.