ಮರುಮೌಲ್ಯಮಾಪನ ಶ್ರಾವ್ಯಾ ಭಟ್ಟ ಜಿಲ್ಲೆಗೆ ಪ್ರಥಮ, ರಾಜ್ಯಕ್ಕೆ 5 ನೇ ರ್ಯಾಂಕ್

ಕುಮಟಾ : ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಹಾಗೂ ವಿಧಾತ್ರಿ ಅಕಾಡೆಮಿ ಸಹಯೋಗದಲ್ಲಿ ನಡೆಯುತ್ತಿರುವ ಸರಸ್ವತಿ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯಾ ಶ್ರೀಧರ ಭಟ್ಟ ಮರುಮೌಲ್ಯಮಾಪನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ..

ಕುಮಟಾದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ಹಾಗೂ ವಿಧಾತ್ರಿ ಅಕಾಡೆಮಿ ಸಹಯೋಗದಲ್ಲಿ ನಡೆಯುತ್ತಿರುವ ಸರಸ್ವತಿ ಪಿ.ಯು ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯಾ ಶ್ರೀಧರ ಭಟ್ಟ, ದ್ವಿತೀಯ ಪಿ.ಯು.ಸಿಯಲ್ಲಿ ಈ ಹಿಂದೆ ರಾಜ್ಯಕ್ಕೆ 7ನೇ ರ್ಯಾಂಕ್ ಬರುವ ಮೂಲಕ ಸಾಧನೆ ಮಾಡಿದ್ದಳು. ಆದರೆ ಈಕೆ ಇಂಗ್ಲೀಷ್ ವಿಷಯದಲ್ಲಿ ತನಗೆ ಇನ್ನೂ ಹೆಚ್ಚಿನ ಅಂಕ ಬರಬೇಕೆಂಬ ಅಚಲ ವಿಶ್ವಾಸದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದಳು.

ಶುಕ್ರವಾರ ಮರುಮೌಲ್ಯಮಾಪನದ ಅಂಕ ಪ್ರಕಟವಾಗಿದ್ದು, ಇಂಗ್ಲೀಷ್ ಭಾಷಾ ವಿಷಯದಲ್ಲಿ 2 ಅಂಕಗಳನ್ನು ಹೆಚ್ಚುವರಿಯಾಗಿ ಪಡೆಯುವುದರ ಮೂಲಕ ಈಕೆ ಕಾಲೇಜಿಗೆ, ಉತ್ತರ ಕನ್ನಡ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದು, ತನ್ನ ಸಾಧನೆಯನ್ನು ಹೆಚ್ಚಿಸಿಕೊಂಡಿದ್ದಾಳೆ.



ಶ್ರಾವ್ಯ ಭೌತಶಾಸ್ತ್ರದಲ್ಲಿ 97, ರಸಾಯನ ಶಾಸ್ತ್ರ, ಗಣಿತ, ಸಂಸ್ಕೃತ, ಜೀವಶಾಸ್ತ್ರದಲ್ಲಿ ತಲಾ ನೂರು ಅಂಕ ಮತ್ತು ಇಂಗ್ಲೀಪ್‌ನಲ್ಲಿ 97, ಅಂಕಗಳೊಂದಿಗೆ ಒಟ್ಟೂ‌ 600 ಅಂಕಗಳಲ್ಲಿ 594 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಬಹುದೊಡ್ಡ ಸಾಧನೆ ಮಾಡಿದ್ದಾಳೆ.

ಈ ಸಂದರ್ಭದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಶ್ರಾವ್ಯಾ ಭಟ್ಟ ಪರೀಕ್ಷೆಯ ಫಲಿತಾಂಶ ಪ್ರಕಟವಾದ ನಂತರದಲ್ಲಿ ನನಗೆ ಇನ್ನೂ ಹೆಚ್ಚಿನ ಅಂಕ ಬರಬೇಕಿತ್ತು. ಆದರೆ ಅಂಕ ಕಡಿಮೆಯಾಗಿದೆ ಎಂಬ ಬಗ್ಗೆ ನೋವಿತ್ತು. ಇದೀಗ ಮರು ಮೌಲ್ಯಮಾಪನದಲ್ಲಿ ಹೆಚ್ಚಿನ ಅಂಕ ಬಂದಿರುವುದು ಸಂತಸ ತಂದಿದೆ ಎಂದರು.

ಈಕೆಯ ಸಾಧನೆಗೆ ಕುಟುಂಬ ವರ್ಗದವರು,ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಶುಭಾಶಯ ಕೋರಿದ್ದಾರೆ.