ಭಟ್ಕಳದಲ್ಲಿ ಮೀನುಗಾರಿಕೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಲೆಗೆ ಸಿಲುಕಿ ಸಾವನ್ನಪ್ಪಿದ ಮೀನುಗಾರ

ಭಟ್ಕಳ ಮೇ. 30 : ಮೀನುಗಾರಿಕೆಗೆ ತೆರಳಿದ ವೇಳೆ ಆಕಸ್ಮಿಕವಾಗಿ ಮೀನಿನ ಬಲೆಗೆ ಸಿಲುಕಿ ಮೀನುಗಾರನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಟ್ಕಳ ತಾಲೂಕಿನ ಬೆಳಕೆ ಮೊಗೇರಕೇರಿ ಹೊಳೆಯಲ್ಲಿ ನಡೆದಿದೆ.

ಮೀನುಗಾರಿಕೆಗೆ ತೆರಳಿದ ವೇಳೆ ಆಕಸ್ಮಿಕವಾಗಿ ಮೀನಿನ ಬಲೆಗೆ ಸಿಲುಕಿ ಮೀನುಗಾರನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಟ್ಕಳ ತಾಲೂಕಿನ ಬೆಳಕೆ ಮೊಗೇರಕೇರಿ ಹೊಳೆಯಲ್ಲಿ ನಡೆದಿದೆ. ಮೃತ ಮೀನುಗಾರನನ್ನು 62 ವರ್ಷದ ಸ್ಥಳೀಯ ಮಂಜುನಾಥ ವೆಂಕ್ಟ ಮೊಗೇರ ಎಂದು ತಿಳಿದು ಬಂದಿದೆ.

ಇವರು ಮೇ 29 ರಂದು ಬುಧವಾರ ಸಂಜೆ 4 ಗಂಟೆ ವೇಳೆಗೆ ಬೆಳಕೆ ಹೊಳೆಗೆ ಬೀಸು ಬಲೆ ತೆಗೆದುಕೊಂಡು ಮೀನುಗಾರಿಕೆಗೆ ಹೋಗಿದ್ದರು. ಮೀನು ಹಿಡಿಯಲು ಬಲೆ ಬೀಸಿದಾಗ ಆಕಸ್ಮಿಕವಾಗಿ ಬಲೆಯ ಕೈ ದಾರ ಕೊರಳಿಗೆ ಸುತ್ತಿಕೊಂಡು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.