ಲೈನ್ ಮೇಲೆ ಮರದ ಟೊಂಗೆ ಬಿದ್ದು ವಿದ್ಯುತ್ ವ್ಯತ್ಯಯ

ಯಲ್ಲಾಪುರ: ಮಳೆ-ಗಾಳಿಯ ಪರಿಣಾಮ ಯಲ್ಲಾಪುರ-ಶಿರಸಿ ರಸ್ತೆಯ ಸವಣಗೇರಿ ಬಳಿ ವಿದ್ಯುತ್ ಲೈನ್ ಮೇಲೆ ಮರದ ಟೊಂಗೆ ಬಿದ್ದು ವಿದ್ಯುತ್ ವ್ಯತ್ಯಯ ಉಂಟಾಯಿತು. ಉಪಳೇಶ್ವರ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಿತ್ತು. ಹೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮರದ ಟೊಂಗೆ ತೆರವುಗೊಳಿಸಿ ವಿದ್ಯುತ್ ಸಂಪರ್ಕ ಕಲ್ಪಿಸಿದರು.