ಕೊಲೆಯಾದ ರೇಣುಕಾಸ್ವಾಮಿ ಕೂಡ ದರ್ಶನ್ ಅಭಿಮಾನಿ? ಪವಿತ್ರಾ ಮೇಲಿತ್ತು ಕೋಪ..?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಂಧನಕ್ಕೆ ಒಳಗಾಗಿದ್ದಾರೆ. ಕೊಲೆ ಕೇಸ್​ನಲ್ಲಿ ಅವರು ಅರೆಸ್ಟ್ ಆಗಿದ್ದಾರೆ. ಮೈಸೂರಿನ ರ‍್ಯಾಡಿಸನ್ ಹೋಟೆಲ್​ನಲ್ಲಿ ಈ ಬಂಧನ ನಡೆದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್​ಗೂ ನಂಟಿದೆ ಎನ್ನಲಾಗಿದೆ. ಅಷ್ಟಕ್ಕೂ ಯಾರು ಈ ರೇಣುಕಾಸ್ವಾಮಿ? ಅವರಿಗೂ ಪವಿತ್ರಾ ಗೌಡಗೂ ಏನು ಸಂಬಂಧ ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿದೆ ಉತ್ತರ.

ರೇಣುಕಾಸ್ವಾಮಿ ಚಿತ್ರದುರ್ಗದ ಲಕ್ಷ್ಮೀವೆಂಕಟೇಶ್ವರ ಬಡಾವಣೆಯ ನಿವಾಸಿ. ಅವರು ಅಪೊಲೋ ಮೆಡಿಕಲ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ (ಜೂನ್ 8) ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಈ ಬಗ್ಗೆ ಕುಟುಂಬದವರಿಗೆ ಆತಂಕ ಎದುರಾಗಿತ್ತು. ಆ ಬಳಿಕ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರ ಮಾಹಿತಿ ನೀಡಿದರು.

ಜೂನ್ 9ರಂದು ಸುಮನಹಳ್ಳಿಯ ಸತ್ವ ಅನುಗ್ರಹ ಅಪಾರ್ಟ್​ಮೆಂಟ್​​ ಸಮೀಪದ ಮೋರಿಯಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿದೆ. ಅನುಗ್ರಹದ ಸೆಕ್ಯೂರಿಟಿ ಆಫೀಸರ್ ಕೇವಲ್​ ರಾಮ್ ದೋರ್​​ ಜೀ ಅವರು ದೂರು ನೀಡಿದರು. ಮೋರಿಯ ಮುಂದೆ 30-35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಪರಿಚಿತ ಶವ ಪ್ರಕರಣವನ್ನು ತನಿಖೆ ಮಾಡಿದ ಪೊಲೀಸರಿಗೆ ಬಿಗ್​ ಲೀಡ್ ಸಿಕ್ಕಿತ್ತು.

ಶವ ಪತ್ತೆ ವೇಳೆ ಮುಖ ಹಾಗೂ ತಲೆಗೆ ಕಿವಿಗೆ ರಕ್ತದಗಾಯವಾಗಿರುವು ಕಂಡು ಬಂದಿದೆ. ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೆಲವರನ್ನು ಬಂಧಿಸಿದ್ದರು. ಅವರು ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪವಿತ್ರಾಗೌಡ ಅವರಿಗೆ ರೇಣುಕಾಸ್ವಾಮಿ ಕೆಟ್ಟಾದಾಗಿ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಅಶ್ಲೀಲ ಮೇಸೆಜ್, ಫೋಟೋ ಹಾಕಿ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಇನ್ನೂ ಕೆಲವರು ಸೇರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.