ಸಿಎಂ ಬದಲಾವಣೆ ಕಾಂಗ್ರೆಸ್‌ನವರ ಭ್ರಮೆ – ಹೆಬ್ಬಾರ್

ಶಿರಸಿ: ಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್‌ನವರ ಭ್ರಮೆ. ಬಸವರಾಜ ಬೊಮ್ಮಾಯಿ ನಾಯಕತ್ವದಲ್ಲೇ ಸರಕಾರ ಮುಂದುವರೆಯುತ್ತದೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ತಾಲೂಕಿನ ಗುಡ್ನಾಪುರ ಕೆರೆ ತುಂಬಿರುವ ಹಿನ್ನೆಲೆಯಲ್ಲಿ ಬುಧವಾರ ಬಾಗಿನ ಸಮರ್ಪಿಸಿ, ಮಾಧ್ಯಮದೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ರಾಜ್ಯಧ್ಯಕ್ಷ ನಳೀನಕುಮಾರ ಬದಲಾವಣೆ ಅಥವಾ ಮುಂದುವರಿಕೆಯ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ಮನೆಮನೆ ಮೇಲೆ ರಾಷ್ಟ್ರಧ್ವಜ ಹಾರಿಸುವುದರಿಂದ ಆಗುವ ತೊಂದರೆಯೇನು.? ಅದರಿಂದ ಏನು ರಾಜಕಾರಣ ಮಾಡಲು ಸಾಧ್ಯ.? ಎಂದು ಅವರು ಪ್ರಶ್ನಿಸಿದ ಅವರು, ಕಾಂಗ್ರೆಸ್ ಅನಗತ್ಯವಾಗಿ ಧ್ವಜದ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಎಂದರು.

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ತೋಟಗಾರಿಕೆ, ಕೃಷಿ ಬೆಳೆ ಸೇರಿದಂತೆ ಅಗಿರುವ ಹಾನಿ ಸಂಬಂದಿಸಿ ಅಧಿಕಾರಿಗಳು ಸರ್ವೆ ನಡೆಸುತ್ತಿದ್ದಾರೆ. ಅಲ್ಲದೇ ಸರಕಾರಕ್ಕೆ ಹಾನಿಯ ವರದಿ ಸಹ ನಿಡುತ್ತಿದ್ದಾರೆ. ಜಿಲ್ಲೆಗೆ ಸಿಎಂ ಈಗಾಗಲೇ ಭೇಟಿ ನೀಡಿದ್ದಾರೆ. 500 ಕೋಟಿ ರೂ.ಬಿಡುಗಡೆ ಮಾಡಿದ್ದಾರೆ. ಮತ್ತೆ ಹಣ ಅವಶ್ಯಕತೆ ಇದ್ದರೆ ಬೇಡಿಕೆ ಈಡೇರಿಸುತ್ತೇವೆ ಎಂದರು.