ಭಟ್ಕಳದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಸಾವನ್ನಪ್ಪಿದ ಬೈಕ ಸವಾರ

ಭಟ್ಕಳ : ಚಲಿಸುತ್ತಿದ್ದ ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಶಿರಾಲಿ ಚಿತ್ರಾಪುರ ಕ್ರಾಸ್ ಬಳಿಯ ರಾ. ಹೆದ್ದಾರಿಯಲ್ಲಿ ನಡೆದಿದೆ.

ಮೃತ ಬೈಕ್ ಸವಾರನನ್ನು ರಾಮಚಂದ್ರ ನಾಗೇಶ ಮೊಗೇರ (42) ಅಳ್ವೆಕೋಡಿ ನಿವಾಸಿ ಎಂದು ತಿಳಿದು ಬಂದಿದೆ. ಮುರ್ಡೇಶ್ವರ ಕಡೆಯಿಂದ ಭಟ್ಕಳ ಕಡೆಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ- 66 ರಸ್ತೆಯಲ್ಲಿ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಶಿರಾಲಿ ಚಿತ್ರಾಪುರ ಕ್ರಾಸ್ ಹತ್ತಿರ ಬಂದು, ಅದೇ ರಸ್ತೆಯಲ್ಲಿ ಮುರ್ಡೇಶ್ವರ ಕಡೆಯಿಂದ ಶಿರಾಲಿ ಕಡೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನ ತಲೆಯ ಹಿಂಬಾಗದಲ್ಲಿ ಗಂಭೀರವಾಗಿ ಗಾಯಗೊಂಡು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಅದೇ ವೇಳೆ ಕಾರನ್ನು ಮುಂದಕ್ಕೆ ಚಲಾಯಿಸಿ ಅವರ ಮುಂದೆ ಭಟ್ಕಳ ಕಡೆಗೆ ಹೋಗುತ್ತಿದ್ದ ರವಿಶಂಕರ್ ಜಟ್ಟಾ ನಾಯ್ಕ ಎನ್ನುವವರ ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಪಡಿಸಿದ್ದಾನೆ. ಬ್ ರವಿಶಂಕರ್ ಜಟ್ಟಾ ನಾಯ್ಕ, ರೇವತಿ ರವಿಶಂಕರ ನಾಯ್ಕ ಹಾಗೂ ಪ್ರತೀಕ್ಷಾ ತಂದೆ ರವಿಶಂಕರ ನಾಯ್ಕ ಇವರಿಗೂ ಸಹ ಸಣ್ಣ ಪುಟ್ಟಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಅಪಘಾತ ಪಡೆಸಿದ ಕಾರನ್ನು ಚಾಲಕ ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ