ಕಲಬುರಗಿ ಹೋಟೆಲ್‌ನಲ್ಲಿ ಸಿಲಿಂಡರ್‌ ಸ್ಫೋಟ – 11 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಕಲಬುರಗಿ: ಇಲ್ಲಿನ ಹೋಟೆಲ್‌ವೊಂದರಲ್ಲಿ ಅಡುಗೆ ಸಿಲಿಂಡರ್‌ ಸ್ಫೋಟಗೊಂಡಿದ್ದು, ಭಾರೀ ಅನಾಹುತ ಸಂಭವಿಸಿದೆ. 11 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.

ಬೆಳ್ಳಂ ಬೆಳಗ್ಗೆ ಕಲಬುರಗಿಯ ಸಪ್ತಗಿರಿ ಆರೆಂಜ್ ಹೋಟೆಲ್ ನಲ್ಲಿ ಘಟನೆದು ನಾಲ್ವರು ಹೋಟೆಲ್‌ ಕಾರ್ಮಿಕರ ಸ್ಥಿತಿ ಗಂಭೀರವಾಗಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ‌ ಬೆಂಕಿ ನಂದಿಸಿ, ಕಾರ್ಮಿಕರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ.

ಘಟನೆಯಲ್ಲಿ ಕಾರ್ಮಿಕರಾದ ರಾಕೇಶ್, ಶಂಕರ್, ಗುರುಮೂರ್ತಿ, ಪ್ರಶಾಂತ್, ಸತ್ಯವಾನ ಶರ್ಮ್, ಅಪ್ಪಾರಾಯ, ಮಲ್ಲಿನಾಥ್, ವಿಠಲ್, ಮಹೇಶ್ ಲಕ್ಷ್ಮಣ ಸೇರಿ 10 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.