ತಗಡಿನ ಶೆಡ್ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ತಂತಿ; ಇಬ್ಬರು ಸಾವು, ನಾಲ್ವರಿಗೆ ಗಾಯ

ಬಾಗಲಕೋಟೆ, ಜೂ.25: ತಗಡಿನ ಶೆಡ್ ಮನೆ ಮೇಲೆ ತಗಡಿನ ಶೆಡ್ ಮೇಲೆ ಬಿದ್ದ ಹೈಟೆನ್ಶನ್ ವಿದ್ಯುತ್ ತಂತಿ ಇಬ್ಬರು ಸಾವು, ನಾಲ್ವರಿಗೆ ಗಾಯ ಹರಿದು ಬಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ದಾಸರಮಡ್ಡಿಯಲ್ಲಿ ನಡೆದಿದೆ. ಸಂತೋಷ ಸುಣಗಾರ(22), ಮತ್ತು ಸಂತೋಷ್​ ಅತ್ತೆ ಶೋಭಾ ಹುಲ್ಲೆಣ್ಣವರ (32) ಮೃತರು. ಇನ್ನುಳಿದಂತೆ ಶ್ರೀಕಾಂತ್ , ಮಹೇಶ್, ಕಸ್ತೂರಿ ಹಾಗೂ ಸಂಗೀತಾ ಕಾಮಶೆಟ್ಟಿ ಸೇರಿ ನಾಲ್ವರಿಗೆ ಗಾಯವಾಗಿದ್ದು, ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜಾತ್ರೆ ಸಂಭ್ರಮದ ಮಧ್ಯೆ ಸಂಭವಿಸಿದ ಅವಘಡ

ದಾಸರಮಡ್ಡಿಯಲ್ಲಿ ದುರ್ಗಾದೇವಿ ಜಾತ್ರೆಯಿತ್ತು. ಜಾತ್ರೆಗೆ ಎಲ್ಲರೂ ಮನೆಯಲ್ಲಿ ಸೇರಿದ್ದರು. ಜೊತೆಗೆ ಮೃತ ಸಂತೋಷ್​ ಹಾಗೂ ಗಾಯಗೊಂಡ ಸಂಗೀತಾ ನಡುವೆ ಎಂಗೇಜ್ ಮೆಂಟ್ ಆಗಿದ್ದು, ಇದೇ‌ ಜೂನ್ 28 ರಂದು ಮದುವೆಯಾಗಲಿದ್ದರು. ಆದರೆ, ಇದೀಗ ಈ ಅವಘಡ ಸಂಭವಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಸ್ಥಳಕ್ಕೆ‌ ತೇರದಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.