ಬುಧವಾರದ ದಿನಭವಿಷ್ಯ ಮತ್ತು ಪಂಚಾಂಗವನ್ನ ತಿಳಿದುಕೊಳ್ಳಿ

ರಾಶಿ ಭವಿಷ್ಯ ಗ್ರಹಗಳು ಮತ್ತು ನಕ್ಷತ್ರಗಳ ಚಲನೆಯನ್ನು ಆಧರಿಸಿದ್ದು, ಪ್ರತಿಯೊಂದು ರಾಶಿಗಳು ತನ್ನದೇ ಆದ ಮಹತ್ವವನ್ನು ಹೊಂದಿದೆ. ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಬುಧವಾರ (ಜೂನ್ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಜ್ಯೇಷ್ಠಾ, ಪಕ್ಷ: ಕೃಷ್ಣ, ವಾರ: ಬುಧ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಧನಿಷ್ಠಾ, ಯೋಗ: ವಿಷ್ಕಂಭ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ 12:36 ರಿಂದ 14:13ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:44 ರಿಂದ ಬೆಳಿಗ್ಗೆ 09:22ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 10:59 ರಿಂದ 12:36ರ ವರೆಗೆ.

ಮೇಷ ರಾಶಿ :ಇಂದು ದೈವಭಕ್ತಿಗೆ ನಿಮಗೆ ಅನುಕೂಲಕರ ವಾತಾವರಣವು ಸಿಗಲಿದೆ. ಎಂತಹ ಕಷ್ಟದಲ್ಲಿಯೂ ನೆಮ್ಮದಿಯನ್ನೇ ಹುಡುಕುವಿರಿ. ಹೊಸ ಕಾರ್ಯವನ್ನು ಮಾಡಲು ಅತಿಯಾದ ಭಯವು ಬರಲಿದೆ. ಅಧಿಕಾರದ ದುರುಪಯೋಗವನ್ನು ಮಾಡಿಕೊಳ್ಳುವಿರಿ. ಇದರಿಂದ ನಿಮ್ಮ ಕೆಳಗಿನವರು ಸಿಟ್ಟಗೊಂಡಾರು.‌ ನಿಮ್ಮ ಕೆಲಸದ ಮೇಲೆ ಇದರ ಪರಿಣಾಮವಿರಲಿದೆ. ನಿಮ್ಮ ನಂಬಿ ಹಣವನ್ನು ಕೊಡಬಹುದು. ಅದನ್ನು ಉಳಿಸಿಕೊಳ್ಳಿ. ಸರಿಯಾಗಿ ಸಮಯವನ್ನು ಬಳಸಿ. ಕಷ್ಟದಿಂದ ಮುಕ್ತಿ ಸಿಕ್ಕಿತೆಂಬ ಸಂತೋಷದಲ್ಲಿರುವಾಗ ನಿಮಗೆ ಅನಾರೋಗ್ಯ ಉಂಟಾಗಲಿದೆ. ಮಕ್ಕಳ ಜೊತೆ ಇರಲು ನಿಮಗೆ ಇಂದು ಅಸಾಧ್ಯವಾದೀತು. ಒಳ್ಳೆಯ ಕಾಲದ ನಿರೀಕ್ಷೆಯಲ್ಲಿ ಇರುವಿರಿ. ಯಾವುದೋ ಗಹನವಾದ ಆಲೋಚನೆಯಲ್ಲಿ ನೀವು ಮುಳುಗಿರುವಿರಿ. ಇನ್ನೊಬ್ಬರ ವಸ್ತುವನ್ನು ಕೇಳಿ ಪಡೆಯಿರಿ. ಆಪ್ತರ ಮಾತಿನಿಂದ ನಿಮ್ಮ ಕೆಲವು ಅಭಿಪ್ರಾಯವು ಬದಲಾಗುವುದು.

ವೃಷಭ ರಾಶಿ :ನಿಮಗೆ ದುರಭ್ಯಾಸದಿಂದ ಉನ್ನತ ಸ್ಥಾನವು ತಪ್ಪಬಹುದು. ಒತ್ತಡವಿದ್ದರೂ ಅದನ್ನು ನಿಭಾಯಿಸಿಕೊಂಡು ಹೋಗುವಿರಿ. ತಂದೆಯಿಂದ ಬರಬಹುದಾದ ಧನವು ವಿಳಂಬವಾಗಲಿದೆ. ನಿಮ್ಮ ವಿವಾಹವನ್ನು ಮಾಡಿಸಬೇಕೆಂಬ ಪ್ರಯತ್ನವು ವ್ಯರ್ಥವಾದೀತು. ರಾಜಕಾರಿಣಿಗಳಿಗೆ ಒಳ್ಳೆಯ ಬೆಂಬಲ ಸಿಗಲಿದೆ‌. ಅನ್ಯ ವ್ಯಕ್ತಿಯ ಮೂಲಕ ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಅಧಿಕಾರದಿಂದ ಕೆಳಗಿಳಿಯಬೇಕಾಗಿದೆ ಎಂಬ ಆತಂಕ ಇರಲಿದೆ. ಧನಲಾಭವಾಗುವುದೆಂದು ಕೆಟ್ಟ ಕಾರ್ಯದಲ್ಲಿ ಮಗ್ನರಾಗುವಿರಿ. ಎಷ್ಟೇ ಅನುಕೂಲವಿದ್ದರೂ ಪ್ರತಿಕೂಲ ಸನ್ನಿವೇಶಗಳನ್ನು ಚಿಂತಿಸುವಿರಿ. ಅಂದುಕೊಂಡಿದ್ದನ್ನು ಬಿಡದೇ ಮುಂದುವರಿಸಿ. ದೀರ್ಘಕಾಲದ ಸ್ನೇಹವು ಮತ್ತೆ ಹೊಸದಾಗಿ ಆರಂಭವಾಗಲಿದೆ. ಸೌಂದರ್ಯವರ್ಧನೆಗೆ ಬೇಕಾದ ಸಮಯವನ್ನು ಕೊಡುವಿರಿ. ಸ್ಪರ್ಧಾತ್ಮಕವಾಗಿ ನೀವು ಕ್ರಿಯಾಶೀಲತೆಯನ್ನು ತೋರಿಸುವಿರಿ.

ಮಿಥುನ ರಾಶಿ :ನಿಮ್ಮ ಇಂದಿನ ಹೊಸ ಪ್ರಯತ್ನಗಳು ಕಾರ್ಯಕ್ಕೆ ಬೇಕಾದ ಉತ್ಸಾಹವನ್ನು ಕೊಡುವುದು. ಸಣ್ಣ ಸಣ್ಣ ವಿಚಾರಕ್ಕೂ ಕಲಹ ಮಾಡುವುದನ್ನು ಕಡಿಮೆ ಮಾಡಿ. ನಿಮ್ಮ ಬಗ್ಗೆ ಹಿಂದಿನಿಂದ ಮಾತನಾಡಿಕೊಳ್ಳುವರು. ಬಂಧುಗಳು ನಿಮ್ಮನ್ನು ಪ್ರೀತಿಸಬಹುದು. ಇಂದು ಹಣದ ಅವಶ್ಯಕತೆಯಿದ್ದು ಸಹೋದರನನ್ನು ಕೇಳುವಿರಿ. ನೂತನ ವಾಹನವನ್ನು ಖರೀದಿಸುವ ಬಗ್ಗೆ ಯೋಚಿಸುವಿರಿ. ಆಪ್ತರಿಂದ ಹಣದ ವಿಚಾರದಲ್ಲಿ ಮೋಸ ಹೋಗುವಿರಿ. ನಿಮ್ಮನ್ನು ಇಷ್ಟಪಡುವ ವ್ಯಕ್ತಿಗಳು ಇರಲಿದ್ದಾರೆ. ಅವರ ಜೊತ ಸಮಯವನ್ನು ಕಳೆಯಲು ಬಯಸುವಿರಿ. ಆರ್ಥಿಕತೆಯ ಬಗ್ಗೆ ಹೆಚ್ಚು ಆಲೋಚನೆ ಇರುವುದು. ಕಛೇರಿಯಲ್ಲಿ ಇಂದು ನೀವು ಸ್ವತಂತ್ರರು. ಮನೋರಥವನ್ನು ಈಡೇರಿಸಿಕೊಳ್ಳುವುದು ನಿಮಗೆ ಕಷ್ಟವಾಗುವುದು. ಮಕ್ಕಳ ಜೊತೆ ಸಮಯವನ್ನು ಕಳೆಯುವಿರಿ. ಸಂಯಮದಿಂದ ವರ್ತಿಸುವ ಅವಶ್ಯಕತೆವಿರಲಿದೆ.

ಕರ್ಕ ರಾಶಿ :ಇಂದು ನೀವು ಎಂತಹ ಚಟುವಟಿಕೆಯಿಂದ ಇದ್ದರೂ ನಿಮ್ಮ ಕೆಲಸ ಮಾತ್ರ ಆಗದೇ ಇರುವುದು. ನಿಮ್ಮ ಮಾತಿನ ಶಕ್ತಿಯನ್ನು ದುರುಪಯೋಗ ಪಡಿಸಿಕೊಳ್ಳಬೇಡಿ. ಆಮೇಲೆ ಅದಕ್ಕೆ ಬೆಲೆಯೇ ಇಲ್ಲದಂತಾದೀತು. ಕೃಷಿಯ ಚಟುವಟಿಕೆಯಲ್ಲಿ ತೊಡಗುವ ಮನಸ್ಸಾದೀತು. ನಿಮ್ಮ ಮೇಲಿರುವ ದೂರನ್ನು ತಳ್ಳಿಹಾಕುವಿರಿ. ಉದ್ಯೋಗದಲ್ಲಿ ಸಿಗುವ ಪದೋನ್ನತಿಯು ಸಿಗುವುದು ತಪ್ಪಲಿದೆ. ಆಪ್ತರ ಜೊತೆ ಈ ಕುರಿತು ಸಮಾಲೋಚನೆ ಮಾಡುವಿರಿ. ಸಕಾರಾತ್ಮಕವಾದ ಚಿಂತನೆ ಇರಲಿ. ಮನೆಯಿಂದ ದೂರ ಬರುವ ನಿಮಗೆ ಸ್ವತಂತ್ರ ಸಿಕ್ಕಂತೆ ಆಗುವುದು. ಹಿರಿಯರಿಗೆ ನೋವುಂಟು ಮಾಡದಂತೆ ಮಾತನಾಡಿ. ಮನಸ್ಸು ಭಾರವಾಗಬಹುದು. ವಾಯುವಿಹಾರ ಮಾಡಿ ಬನ್ನಿ. ನಿಮ್ಮ ಮಾತುಗಳಿಂದ ನೋವಾಗಲಿದೆ. ಹೇಳಬೇಕಾದುದನ್ನು ನೇರವಾಗಿ ಹೇಳಿ. ನಿಮ್ಮಿಂದ ಆಗುವ ಕಾರ್ಯವನ್ನು ಮಾಡಿಕೊಡಿ.

ಸಿಂಹ ರಾಶಿ :ಇಂದು ನಿಮ್ಮ ಗೃಹ ನಿರ್ಮಾಣದ ಕಡೆಗೆ ಗಮನವಾಗಬೇಕಾಗುವುದು. ಇಂದು ಸ್ನೇಹಿತರ ಜೊತೆ ಹೋಗಬೇಕಿದ್ದ ನಿಮ್ಮ ಪ್ರಯಾಣವು ತುರ್ತು ಕಾರ್ಯದಿಂದ ರದ್ದಾಗಬಹುದು. ಬಹಳ ಆಯಾಸವಾದರೂ ಒತ್ತಡಗಳಿದ್ದರೂ ಇಂದಿನ ಕೆಲಸವನ್ನು ಮಾಡಿ ಮುಗಿಸುವಿರಿ. ಅಪರಿಚಿತ ದೂರವಾಣಿಯ ಕರೆಯಿಂದ ಲಾಭದಾಯಕವಾದ ಕೆಲಸವು ಸಿಗಬಹುದು. ಸರ್ಕಾರಿ ಕೆಲಸಗಳು ನಿಧಾನವಾಗಲಿದೆ. ಇನ್ನೊಬ್ಬರ ವಸ್ತುವನ್ನು ನಿಮ್ಮದನ್ನಾಗಿಸಿಕೊಳ್ಳುವಿರಿ. ಬೇಸರ ಪಡುವ ಅವಶ್ಯಕತೆ ಇಲ್ಲ. ನಿಧಾನವಾಗಿಯಾದರೂ ಚಲಿಸುತ್ತದೆ ಎಂಬ ಸಂತೋಷವಿರಲಿ. ನಿಮಗೆ ಆಗದವರು ತೊಂದರೆ ಕೊಡುತ್ತಿದ್ದಾರೆ ಎಂಬ ಅನುಮಾನವು ಬರಬಹುದು. ಇಂದು ವ್ಯಾಪಾರವನ್ನು ಮಾಡುವ ಮನಸ್ಸು ಇಲ್ಲದಿದ್ದರೂ ಮನೆಯಲ್ಲಿ ಕುಳಿತು ಬೇಸರವಾಗಬಹುದು. ವಿದೇಶದವರ ಜೊತೆ ನಿಮ್ಮ ವ್ಯವಹಾರವು ನಡೆಯುವುದು. ನಿಮಗೆ ಬೇಕಾದ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳುವಿರಿ.

ಕನ್ಯಾ ರಾಶಿ :ಇಂದು ಮಕ್ಕಳ ವಿಚಾರಕ್ಕೆ ಹಣವು ವ್ಯಯವಾಗಬಹುದು. ಅಕಾರಣವಾದ ವಿವಾದಗಳಿಂದ ಸಮಯವು ಹಾಳಾಗಬಹುದು.‌ ಹಣ ಸಂಪಾದನೆಗೆ ದೂರಪ್ರಯಾಣ ಮಾಡಬೇಕಾದೀತು. ಮಾಡಲು ತುಂಬ ಕೆಲಸಗಳಿದ್ದು ಯಾವುದನ್ನು ಮಾಡುವುದು ಎಂಬ ಗೊಂದಲ ಸೃಷ್ಟಿಯಾಗಬಹುದು. ಹಿರಿಯರು ನಿಮ್ಮನ್ನು ಪ್ರಶಂಸಿಸುವರು. ದಾಂಪತ್ಯದಲ್ಲಿ ಸಣ್ಣ ಕಲಹವಾಗಬಹುದು. ಬದಬೇಕಾದ ಹಣಕ್ಕಾಗಿ ಕಾಯುವಿರಿ. ಅದರ ಫಲವು ಸಂಜೆಯ ತನಕ ಇರಲಿದೆ. ಒಂದನ್ನು ಪಡೆಯಲು ಹೋಗಿ ಎರಡನ್ನು ಕಳೆದುಕೊಳ್ಳಬೇಕಾದೀತು. ಇಂದು ಬರುವ ಅತಿಥಿಗಳನ್ನು ಸತ್ಕರಿಸಿ. ತುಂಬ ಸಮಸ್ಯೆಗಳು ಬಂದಂತೆ ಕಾಣಬಹುದು. ಹೊಸ ಉದ್ಯೋಗವನ್ನು ಮಾಡುವ ಸಾಮರ್ಥ್ಯ ಇದ್ದರೂ ಅಳುಕು ನಿಮ್ಮನ್ನು ಹಿಂದೆ ಸರಿಯುವಂತೆ ಮಾಡುವುದು. ನಿಮಗೆ ಗೊತ್ತೇ ಇರದ ಕೆಲಸವನ್ನು ನೀವು ಮಾಡಬೇಕಾದೀತು. ಮಾನಸಿಕ ತೊಳಲಾಟವನ್ನು ಪ್ರಯತ್ನಪೂರ್ವಕವಾಗಿ ಕಡಿಮೆ ಮಾಡಿಕೊಳ್ಳಿ. ನಿಮ್ಮ ಬಗ್ಗೆ ಬರುವ ಆರೋಪವನ್ನು ಸುಳ್ಳು ಮಾಡಿ ತೋರಿಸುವ ಕಾರ್ಯಕ್ಕೆ ಮುಂದಾಗುವಿರಿ.

ತುಲಾ ರಾಶಿ :ಉದ್ವೇಗವು ನಿಮ್ಮ ಕೆಲಸವನ್ನು ಅಸ್ತವ್ಯಸ್ತ ಮಾಡಲಿದೆ. ವಾಸಸ್ಥಳದ ಬದಲಾವಣೆಯಿಂದ‌ ನೆಮ್ಮದಿ ಇರುವುದು. ಪ್ರಭಾವಿ ಜನರ ಭೇಟಿಯಿಂದ ಹೊಸ ದಿಕ್ಕು ಲಭಿಸುವುದು. ಆಸ್ತಿ ಖರೀದಿಯ ಬಗ್ಗೆ ಹೆಚ್ಚಿನ ಒಲವಿರಲಿದೆ‌. ಭೂಮಿಯನ್ನು ಪಡೆಯುವ ತವಕದಲ್ಲಿ ವ್ಯವಹಾರವನ್ನು ಸರಿಯಾಗಿ ನೋಡಿಕೊಳ್ಳಿ. ಅಮೂಲ್ಯವಾದ ವಸ್ತುವೊಂದು ನಿಮ್ಮ ಸ್ನೇಹಿತರಿಗೆ ಕೊಡುಗೆಯಾಗಿ ನೀಡುವಿರಿ. ಧಾರ್ಮಿಕ ಕ್ಷೇತ್ರಕ್ಕೆ ಪ್ರಯಾಣ ಬೆಳೆಸುವ ಸಾಧ್ಯತೆ ಇರುತ್ತದೆ. ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಕ್ಕೆ ನಿಮ್ಮನ್ನು ಗೌರವಿಸಲಿದ್ದಾರೆ. ಪ್ರೇಮದಲ್ಲಿ ಬಿರುಕು ಬಂದು ಪರಸ್ಪರ ಆರೋಪಗಳು ಆಗಬಹುದು. ವಿದೇಶ ಪ್ರವಾಸದ ಕನಸು ಕಾಣುತ್ತಿರುವವರು ನನಸು ಮಾಡಿಕೊಳ್ಳಬಹುದಾಗಿದೆ. ನಿಮ್ಮ ಉಪಕಾರಕ್ಕೆ ಪ್ರತ್ಯುಪಕಾರವು ಸಿಗದೇ ಇರಬಹುದು. ಮನೆಗೆ ಅತಿಥಿಗಳ ಆಗಮನವಾಗಲಿದ್ದು ನಿಮ್ಮ ಇಂದಿನ ಕಾರ್ಯವು ಬದಲಾಗಬಹುದು. ನಿಮ್ಮ ಇಂದಿನ ಗುರಿ ಬದಲಾಗಬಹುದು.

ವೃಶ್ಚಿಕ ರಾಶಿ :ನಿಮ್ಮ ನ್ಯಾಯಾಲಯದ ಕಾರ್ಯಗಳು ಮಂದಗತಿಯಲ್ಲಿ ಸಾಗಲಿವೆ. ಅನೇಕ‌ ಅನುಮಾನಗಳಿಗೆ ಕಾರಣವಾಗಬಹುದು. ಸ್ತ್ರೀಯರು ಮಂಗಳ‌ಕಾರ್ಯಗಳಲ್ಲಿ ತೊಡಗುವರು. ಮನೆ ಬಳಕೆಗೆ ಬೇಕಾದ ವಸ್ತುಗಳನ್ನು ಖರೀದಿಸುವಿರಿ. ಹಣದ ವಿಚಾರದಲ್ಲಿ ನಿಮಗಿಂದು ನಿರಾಸಕ್ತಿ ಬರಬಹುದು. ಕಛೇರಿಯ ಜವಾಬ್ದಾರಿಯಲ್ಲಿ ಮೂಗು ತೂರಿಸುವುದು ಆಗದು. ಆಲೋಚನೆಗೆ ತಕ್ಕಂತೆ ಯಾವುದೂ ನಡೆಯದು ಎಂಬ ಬೇಸರವು ಹೆಚ್ಚಾಗಿ ಕಾಡಬಹುದು. ಹಳೆಯ ಮಿತ್ರರ ಭೇಟಿಯಾಗಲಿದೆ. ವೈಮನಸ್ಯ ಎದುರಾದಾಗ ಹೊಂದಾಣಿಕೆಯ ಜೊತೆ ಹೊಂದಾಣಿಕೆ ಮಾಡಿಕೊಳ್ಳಿ. ನಿಮ್ಮ ಆದಾಯಕ್ಕೆ ಯಾರಾದರೂ ಅಡ್ಡಗಾಲು ಹಾಕುವವರಿರುವರು. ಬಂಧುಗಳ ವರ್ತನೆಯು ನಿಮಗೆ ಬೇಸರ ತರಿಸೀತು. ಮೇಲ್ನೋಟಕ್ಕೆ ಯಾವುದನ್ನೂ ತೀರ್ಮಾನ ಮಾಡುವುದು ಬೇಡ. ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನಹರಿಸುವರು. ದೇವರ ಬಗ್ಗೆ ಶ್ರದ್ಧೆಯು ಕಡಿಮೆಯಾಗಲಿದೆ. ಆಸ್ತಿಯ ಖರೀದಿಯ ವಿಚಾರದಲ್ಲಿ ನೀವು ಸರಿಯಾದ ಮಾಹಿತಿಯನ್ನು ಪಡೆಯುವುದು ಸೂಕ್ತ.

ಧನು ರಾಶಿ :ನೀವು ಇಂದು ಮಾಡಿದ ತಪ್ಪನ್ನು ಮಾಡದೇ ಎಲ್ಲರಿಂದ ಸೈ ಎನಿಸಿಕೊಳ್ಳುವಿರಿ. ಪರರ ಕಷ್ಟಗಳಗೆ ಸ್ಪಂದಿಸಲು ಆಗದೇ ಇರಬಹುದು. ಆಗಿಹೋದ ವಿಷಯವನ್ನು ಮತ್ತೆ ನೆನಪಿಸಿಕೊಂಡು ದಾಂಪತ್ಯದಲ್ಲಿ ಜಗಲಕವಾಗಬಹುದು. ಶತ್ರುಗಳಿಂದ ಮನೆಯಲ್ಲಿ ಕಿರಿಕಿರಿಯಾಗಲಿದೆ. ಮಕ್ಕಳಿಂದ ನಿಮಗೆ ಅಶುಭವಾರ್ತೆಯು ಬರಲಿದೆ. ಆರ್ಥಿಕಸ್ಥಿತಿಯನ್ನು ಊರ್ಜಿತಗೊಳಿಸಲು ಬಹಳ ಶ್ರಮ ಪಡುವಿರಿ. ಪಶ್ಚಾತ್ತಾಪದಿಂದ ಆಗಬೇಕಾದುದು ಏನಿಲ್ಲ ಎಂದು ಭಾವಿಸುವುದು ಬೇಡ. ತಂದೆ ಹಾಗು ತಾಯಿಯರ ಆಶೀರ್ವಾದವನ್ನು ಪಡೆದು ನಿಮ್ಮ ಕೆಲಸಕ್ಕೆ ತೆರಳಿ. ಪಾಲುದಾರಿಕೆಯ ವಿಚಾರದಲ್ಲಿ ನೀವು ಆತುರಪಡಬಾರದು. ತಂತ್ರಜ್ಞರಿಗೆ ಉನ್ನತಸ್ಥಾನಕ್ಕೆ ಹೋಗುವ ಸಾಧ್ಯತೆ ಇದೆ. ನೂತನ ವಾಹನದಲ್ಲಿ ಸಂಚರಿಸುವಿರಿ. ಅತಿಯಾಗಿ ಮಾತಾನಾಡಿ ಗುಟ್ಟನ್ನು ರಟ್ಟು ಮಾಡುವಿರಿ. ಬೇಡದ ಕಾರ್ಯಕ್ಕೆ ಯಾರಾದರೂ ಪ್ರಚೋದಿಸಿಯಾರು. ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು. ಸಾಮಾಜಿಕವಾದ ಗೌರವವನ್ನು ನೀವು ಅನಾಯಾಸವಾಗಿ ಪಡೆದುಕೊಳ್ಳುವಿರಿ.

ಮಕರ ರಾಶಿ :ನೀವು ಅಪ್ತರ ಸಲಹೆಗಳನ್ನು ಕೇಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ. ವೃತ್ತಿಕ್ಷೇತ್ರದಲ್ಲಿ ಸಹೋದ್ಯೋಗಿಯಿಂದ ತೊಂದರೆ ಬರಬಹುದು. ಮಾತನಾಡಲು ಬಹಳ ಮುಜುಗರವಾದೀತು. ನಿಮಗೆ ಬೇಕಾದುದನ್ನೇ ಮಾಡಿಸಿಕೊಳ್ಳುವ ಹಠದ ಸ್ವಭಾವ ಹೆಚ್ಚಿರುವುದು. ಹೆಚ್ಚಿನ ಜವಾಬ್ದಾರಿಗಳು ಸಿಗಬಹುಸು. ಓಡಾಟದಿಂದ ದೇಹಕ್ಕೆ ಆಯಾಸವಾಗಬಹುದು. ಸಮಯೋಚಿತವಾಗಿ ಕಾರ್ಯವನ್ನು ಮಾಡಿ. ದೂರಪ್ರಯಾಣವನ್ನು ಮೊಟಕುಗೊಳಿಸಿ. ಜವಾಬ್ದಾರಿಯು ಹಿಡಿತ ತಪ್ಪಬಹುದು ಎಂಬ ಭಯವೂ ಇರಲಿದೆ. ಮಾತಿನಿಂದ ಕಲಹವಾಗಬಹುದು. ತಂದೆಗೆ ಸಮಾನರಾದವರ ಜೊತೆ ಕಲಹವನ್ನು ಮಾಡಿಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಅನುಕಂಪ ಬೇಕಸದೀತು. ಎಲ್ಲರ ಮೇಲೂ ಅನುಮಾನ ಪಡುವ ದುರಭ್ಯಾಸವು ಬೆಳೆಯಬಹುದು. ಮನೆಯ ಸಮೀಪದಲ್ಲಿಯೇ ನಿಮ್ಮ ಉದ್ಯೋಗವು ಸಿಗಲಿದೆ. ಮನೆಯಲ್ಲಿ ತಾಳ್ಮೆಯಿಂದ ವ್ಯವಹರಿಸಿ. ನಿಮ್ಮ ವಾಹನಕ್ಕಾಗಿ ಖರ್ಚನ್ನು ಮಾಡಬೇಕಾಗುವುದು.

ಕುಂಭ ರಾಶಿ :ಇಂದು ಉದ್ಯಮದ ಅಭಿವೃದ್ಧಿಗೆ ಬೇಕಾದ ಸಭೆಯನ್ನು ಕರೆಯುವಿರಿ. ಹಿತಶತ್ರುಗಳು ನಿಮಗೆ ಹಿನ್ನಡೆ ತಂದಾರು. ಸಂತೋಷದಿಂದ ಇಂದು ಇರುವಿರಿ. ನಿಮ್ಮ ಕಾರ್ಯಕ್ಕೆ ಉತ್ತಮವಾದ ಯಶಸ್ಸು ಸಿಗಲಿದೆ‌. ನಿಮ್ಮನ್ನು ಪರಿಚಿತರು ಮಾತನಾಡಿಸದೇ ಇರಬಹುದು. ಕೃಷಿಕರು ಇಂದು ತಮ್ಮ ಕಾರ್ಯದಲ್ಲಿ ಮಂದಗತಿಯನ್ನು ಕಾಣಬಹುದಾಗಿದೆ. ಭೂಮಿಯ ಮೇಲೆ ಹೂಡಿಕೆ ಮಾಡಲು ಸಲಹೆಗಳು ಬರಬಹುದು. ವೃತ್ತಿಪರರು ಬಹಳ ಉತ್ಸಾಹದಿಂದ ಕಛೇರಿಯಲ್ಲಿ ಕೆಲಸವನ್ನು ಮಾಡುವರು. ಮನಸ್ಸಿನಲ್ಲಿ ಕೆಟ್ಟದ್ದಿದ್ದರೆ ಜೀವನವೂ ಹಾಳಾಗುತ್ತದೆ ಎಂಬ ಸತ್ಯವು ನೆನಪಿನಲ್ಲಿ ಇರಲಿ. ಸಂಪತ್ತಿನ ವಿಚಾರದಲ್ಲಿ ಜಾಗಕರೂಕರಾಗಿರಿ. ನಿಮ್ಮನ್ನು ನಂಬಿಸಿ ಕೆಲಸ ಮಾಡಿಸಿಕೊಳ್ಳುವರು. ಪರಿಚಿತರ ಮೂಲಕ ನಿಮಗೆ ಅಪರಿಚಿತರ ಸಹಾಯ ದೊರೆಯುವುದು. ದಿನದ ಕೆಲಸವೇ ಇಂದು ಬಹಳ ಆಗಲಿದ್ದು ಇನ್ನೊಬ್ಬರ ಕೆಲಸವನ್ನು ಮಾಡಿಕೊಡಲು ತಾಳ್ಮೆ ಇರಲಾರದು. ಹೂಡಿಕೆಗೆ ಯಾರಿಂದಲಾದರೂ ಪ್ರೇರಣೆ ಸಿಗಬಹುದು.

ಮೀನ ರಾಶಿ :ಇಂದು ನಿಮಗೆ ನೌಕರರಿಂದ ತೊಂದರೆ ಬರಬಹುದು. ವಿಶೇಷ ದ್ರವ್ಯ ಲಾಭದಿಂದ ಸಂತೋಷಪಡುವಿರಿ. ವ್ಯಾಪಾರದಿಂದ ಅಧಿಕ ಹಣವು ಉಳಿತಾಯವಾಗಲು ಚಿಂತನೆ ನಡೆಸುವಿರಿ. ಕೆಲಸವನ್ನು ಮಾಡಿಸಿಕೊಳ್ಳಲು ಜಾಣ್ಮೆಯಿಂದ ಮಾತನಾಡುವಿರಿ. ವಿದ್ಯಾರ್ಥಿಗಳು ಮುಂದಿನ ಓದಿಗೆ ಬೇಕಾದ ತಯಾರಿ ನಡೆಸುವರು. ಉದ್ಯೋಗದಲ್ಲಿ ಜವಾಬ್ದಾರಿ ಸ್ಥಾನವವನ್ನು ಪಡೆಯುವಿರಿ. ಯಾವುದನ್ನೇ ಆದರೂ ನಿಷ್ಠೆಯಿಂದ ಕಾರ್ಯ ಮಾಡುವಿರಿ. ಬಂಧುಗಳ ಬೆಂಬಲ‌ ನಿಮ್ಮ ಕಾರ್ಯಕ್ಕೆ ಸದಾ ಇರಲಿದೆ. ಇಂದು ನಿಧಾನವಾಗಿ ಕೆಲಸಕಾರ್ಯಗಳು ನಡೆಯಲಿವೆ. ಪುಣ್ಯಕ್ಣೇತ್ರಗಳ ಭೇಟಿಯನ್ನು ಮಾಡುವಿರಿ. ಸಂಗಾತಿಯನ್ನು ಸಂಬಾಳಿಸಿಕೊಂಡು ಹೋಗಬೇಕಾಗುವುದು. ಸಾಲಬಾಧೆಯಿಂದ ನೀವು ಮುಕ್ತಾರಾಗಲಿದ್ದೀರಿ. ಮನೆಯ ಹಿರಿಯರ ಬಗ್ಗೆ ಪ್ರೀತಿ ಹೆಚ್ಚಾಗಬಹುದು. ಸಂಗಾತಿಯ ಜೊತೆ ಭಿನ್ನಮತವು ಬರಬಹುದು. ಕುಟುಂಬದ ಹಿರಿಯರ ಅನಾರೋಗ್ಯದ ಕಾರಣ ನಿಮ್ಮ ಸ್ವಂತ ಕಾರ್ಯವನ್ನು ಮಾಡಿಕೊಳ್ಳಲಾಗದು.