BREAKING NEWS ದಾಂಡೇಲಿ ನಗರದಲ್ಲಿ ಅಗ್ನಿ ಅವಘಡ.! ಬೆಂಕಿಯ ಕೆನ್ನಾಲಿಗೆಗೆ ಮನೆ ಸುಟ್ಟು ಭಸ್ಮ.! ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ

ದಾಂಡೇಲಿ: ನಗರದ ಲಕ್ಷ್ಮಿಗುಡಿ ಏರಿಯಾದಲ್ಲಿ ಮನೆಯೊಂದಕ್ಕೆ ಬೆಂಕಿ ಬಿದ್ದು ಭಾರೀ ಅವಘಡ ಸಂಭವಿಸಿದೆ. ನಗರದ ಕನ್ನಡ ಪ್ರಾಥಮಿಕ ಶಾಲೆಯ ಸಮೀಪವಿರುವ ಮನೆಯೊಂದಕ್ಕೆ ಬೆಂಕಿ ತಗುಲಿದ್ದು ಸುತ್ತಲೂ ವ್ಯಾಪಿಸುವ ಆತಂಕ ಎದುರಾಗಿದೆ. ಶಾಹಿನ ಖಾನ್ ಎನ್ನುವವರಿಗೆ ಸೇರಿದ ಮನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದೆ. ಮನೆಯ ಮುಂಭಾಗ ಹಾಗೂ ಹಿಂಬದಿಯಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ಇನ್ನು ನಗರ ಪಿಎಸ್ ಐ ಕಿರಣ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಇನ್ನು ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್ ಹಾಗೂ ನಗರಸಭೆ ಉಪಾಧ್ಯಕ್ಷರು ಸೇರಿದಂತೆ ಹಲವರು ಆಗಮಿಸಿದ್ದಾರೆ. ಬೆಂಕಿಯ ಕೆನ್ನಾಲಿಗೆ ಅಕ್ಕ ಪಕ್ಕದ ಮನೆಗಳಿಗೆ ವ್ಯಾಪಿಸಿದೆ. ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.