ಲಾರಿಗಳ ನಡುವೆ ಡಿಕ್ಕಿ: ಓರ್ವ ಸಾವು

ಯಲ್ಲಾಪುರ: ತಾಲೂಕಿನ ಹಿಟ್ಟಿನಬೈಲ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಲಾರಿಗಳ ನಡುವೆ ಡಿಕ್ಕಿ ಸಂಭವಿಸಿ ಒರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಮೃತಪಟ್ಟ ವ್ಯಕ್ತಿ ಮಹಾರಾಷ್ಟ್ರದ ಪರಮೇಶ್ವರ ಲಕ್ಷ್ಮಣ ದಖಲವಾಡ (25) ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದ ಜಸ್ಪಾಲ್ ಕೆಸಾರ್ ಸಿಂಗ್, ದಿಲೀಪ್ ಮಾರುತಿ ಯವನೆ ಹಾಗೂ ಮಹಾರಾಷ್ಟ್ರದ ರಾಜು ಬಾಬುರಾವ್ ಎಳ್ಳೆ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿಯ ಚಾಲಕ ರಾಜು ಎಳ್ಳೆ ಹೆದ್ದಾರಿಯಲ್ಲಿನ ಹೊಂಡ ತಪ್ಪಿಸಲು ಹೋದಾಗ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಎರಡೂ ಲಾರಿಗಳು ರಸ್ತೆಗ ಬದಿಯಲ್ಲಿ ಹೋಗಿ ಜಖಂಗೊಂಡಿದೆ. ಒಬ್ಬ ಮೃತಪಟ್ಟಿದ್ದು, ಗಾಯಗೊಂಡ ಮೂವರನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.