ಮೊಬೈಲ್ ಚಾರ್ಜ್ ಹಾಕಲು ಹೋಗಿ ವಿದ್ಯಾರ್ಥಿ ಸಾವು

ಬೆಂಗಳೂರು: ಎಲೆಕ್ಟ್ರಿಕ್ ಶಾಕ್ ನಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ರಾಜಾಜಿನಗರ ಬಳಿಯ ಮಂಜುನಾಥ್ ನಗರದ ಪಿಜಿಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿಯನ್ನು ಶ್ರೀನಿವಾಸ್ (24) ಎಂದು ಗುರುತಿಸಲಾಗಿದ್ದು, ಈತ ಬಿದರ್ ಮೂಲದವನು.

ಶ್ರೀನಿವಾಸ್, ಬೀದರ್ ನಿಂದ ಬೆಂಗಳೂರಿಗೆ ಬಂದು ಸಾಫ್ಟ್ ವೇರ್ ಕೋರ್ಸ್ ಮಾಡುತ್ತಿದ್ದ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಪಿಜಿಯಲ್ಲಿ ತನ್ನ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದಾನೆ. ಈ ವೇಳೆ ಎಲೆಕ್ಟ್ರಿಕ್ ಶಾಕ್‍ನಿಂದ ಆತ ಮೃತಪಟ್ಟಿದ್ದಾನೆ.

ಚಾಜಿರ್ಂಗ್ ವೈರ್ ಅಥವಾ ಸ್ವಿಚ್ ಬೋರ್ಡ್ ನಿಂದ ವಿದ್ಯುತ್ ತಗುಲಿ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಸಂಬಂಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.