ಧಾಮುಲ್ ಅಧ್ಯಕ್ಷರಾಗಿ ಮುಗದ್, ಉಪಾಧ್ಯಕ್ಷರಾಗಿ ಸುರೇಶ್ಚಂದ್ರ ಕೆಶಿನ್ಮನೆ ಆಯ್ಕೆ

ಧಾರವಾಡ : ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ಶಂಕರ ವೀರಪ್ಪ ಮುಗದ್ ಆಯ್ಕೆಯಾಗಿದ್ದಾರೆ. ಶುಕ್ರವಾರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 8 ಮತಗಳನ್ನು ಪಡೆಯುವುದರ ಮೂಲಕ ಸ್ಪಷ್ಟ ಬಹುಮತದಿಂದ ಅವರು ಅಧ್ಯಕ್ಷರಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.