ಕರ್ನಾಟಕ ವಿಶ್ವ ನಿರ್ಮಾಣ ಸೇನೆ ವತಿಯಿಂದ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ

ದಾಂಡೇಲಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ವಿಶ್ವ ನಿರ್ಮಾಣ ಸೇನೆ ವತಿಯಿಂದ ತಹಶೀಲ್ದಾರ ಕಚೇರಿಯ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಿಶ್ವ ನಿರ್ಮಾಣ ಸೇನೆ ಜಿಲ್ಲಾಧ್ಯಕ್ಷ ದಸ್ತಗಿರಿ ಮುಲ್ಲಾ, ತಾಲೂಕು ಅಧ್ಯಕ್ಷ ಮೆಹಬೂಬ್ ಮುಲ್ಲಾ, ಸದಸ್ಯರಾದ ಪ್ರದೀಪ ಮುಕಾರಿ, ಮಾರುತಿ ಕುರವಿ, ಅಲ್ತಾಫ್ ಕಲಕೇರಿ ಮುಂತಾದವರು ಉಪಸ್ಥಿತರಿದ್ದರು..