ಗರ್ಭಿಣಿಯ ಮೇಲೆ ಹರಿದ ಲಾರಿ, ಹೊಟ್ಟೆಯಿಂದ ಹೊರಬಂದ ಮಗು ಸಹಿತ ಅಪ್ಪಚ್ಚಿ

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ನಡೆದ ಘೋರ ಅಪಘಾತ ಒಂದರಲ್ಲಿ, ಟಿಪ್ಪರ್‌ ಲಾರಿಗೆ ಗರ್ಭಿಣಿ ಬಲಿಯಾಗಿದ್ದಾರೆ. ಹೊಟ್ಟೆಯಲ್ಲಿದ್ದ ಮಗು ಸಹಿತ ಹೊಟ್ಟೆಯಿಂದ ಹೊರಬಂದು ಸಾವಿಗೀಡಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿ ಘೋರ ದುರಂತ ಸಂಭವಿಸಿದೆ. ಬೈಕ್‌ನಲ್ಲಿ ಹೋಗುತ್ತಿದ್ದ ದಂಪತಿಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ. 8 ತಿಂಗಳ ಗರ್ಭಿಣಿ ಮಹಿಳೆ ಸಾವನ್ನಪ್ಪಿದ್ದಾರೆ. ಟಿಪ್ಪರ್ ಮೈಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ ಮಗು ಕೂಡ ಹೊರಗೆ ಬಂದು ಅಸುನೀಗಿದೆ.

ಮೃತ ಮಹಿಳೆಯನ್ನು ಎಡೇಹಳ್ಳಿ ಗ್ರಾಮದ ಸಿಂಚನ (30) ಎಂದು ಗುರುತಿಸಲಾಗಿದೆ. ಪತಿ ಮಂಜುನಾಥ್ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.