ಕಾರು, ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

ಯಲ್ಲಾಪುರ: ಕಾರು ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗುಳ್ಳಾಪುರ ಸಮೀಪದ ಮೊಗದ್ದೆ ಬಳಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ.

ಕೊಡ್ಲಗದ್ದೆಯ ಕೃಷ್ಣ ಸುಬ್ರಾಯ ಹೆಗಡೆ (71) ಮೃತ ವ್ಯಕ್ತಿಯಾಗಿದ್ದಾನೆ. ಕಾರಿನಲ್ಲಿ ಯಲ್ಲಾಪುರದಿಂದ ಕೊಡ್ಲಗದ್ದೆಗೆ ಹೋಗುವಾಗ ಅಂಕೋಲಾ ಕಡೆಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಎರಡೂ ವಾಹನಗಳು ಜಖಂಗೊಂಡಿದ್ದು, ಟ್ಯಾಂಕರ್ ಚಾಲಕ ನರಗುಂದದ ಮಹಮ್ಮದ್ ಇಬ್ರಾಹಿಂ ರುಸುಲ್ ಸಾಬ್ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.