ಕೇರಳದ ಮುಸ್ಲಿಂ ಯುವಕನನ್ನು ಮದುವೆಯಾದ ಹಿಂದೂ ಯುವತಿ

ಮಂಗಳೂರು, ಆಗಸ್ಟ್​​ 10: ಮುಸ್ಲಿಂ ಯುವಕನೊಂದಿಗೆ ನಾಪತ್ತೆಯಾಗಿದ್ದ ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯ ಪ್ರಕರಣ ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ಕೇರಳದ ಮೊಹಮ್ಮದ್ ಅಶ್ಫಾಕ್‌ ವಿಸ್ಮಯಳನ್ನು ಮದುವೆಯಾಗಿದ್ದಾನೆ.

ಏನಿದು ಘಟನೆ

ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯ, ಕ್ರಿಮಿನಲ್​ ಹಿನ್ನೆಲೆ ಉಳ್ಳ ಮೊಹಮ್ಮದ್ ಅಶ್ಫಾಕ್​​​ನ ಪ್ರೀತಿ ಬಲೆಗೆ ಬಿದ್ದಿದ್ದಳು. ಮೊಹಮ್ಮದ್ ಅಶ್ಫಾಕ್​​ನಿಗೆ ಈಗಾಗಲೇ ಒಂದು ಮದುವೆಯಾಗಿದೆ. ಅಲ್ಲದೆ ಮೊಹಮ್ಮದ್ ಅಶ್ಫಾಕ್​ನ ವಿರುದ್ಧ ಕಾಸರಗೋಡಿನ ವಿದ್ಯಾನಗರ ಪೊಲೀಸ್​ ಠಾಣೆಯಲ್ಲಿ ಎಂಟು ಪ್ರಕರಣಗಳು ದಾಖಲಾಗಿವೆ. ಕಾಸರಗೋಡಿನಲ್ಲೇ ವಿಸ್ಮಯ ಮತ್ತು ಆಶ್ಫಕ್​ನ ನಡುವೆ ಲವ್ವಿ ಡವ್ವಿ ನಡೆದಿತ್ತು.

ವಿಸ್ಮಯ ತಂದೆ ವಿನೋದ್​ ಅವರು ವಿಸ್ಮಯಳನ್ನು ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿ ಇರಿಸಿ ಬಿಸಿಎ ಶಿಕ್ಷಣ ಕೊಡಿಸುತ್ತಿದ್ದರು. ಇಲ್ಲಿಯೂ ಆಕೆಯನ್ನು ಬಿಡದ ಆಶ್ಫಕ್​​ ಕಳೆದ ಜೂನ್​ 6 ರಂದು ಉಳ್ಳಾಲದಿಂದ ವಿಸ್ಮಯ ಕರೆದುಕೊಂಡು ಹೋಗಿದ್ದನು. ವಿದ್ಯಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿ ವಿಸ್ಮಯಳನ್ನ ಮನೆಯವರ ಜೊತೆ ಕಳುಹಿಸಿದ್ದರು. ಮತ್ತೆ ಜೂ‌ನ್ 30ರಂದು ಆಶ್ಫಕ್​​ ಉಳ್ಳಾಲದಿಂದ ವಿಸ್ಮಯಳನ್ನು ಅಪಹರಿಸಿ ಕೊಚ್ಚಿಗೆ ಕರೆದುಕೊಂಡು ಹೋಗಿದ್ದನು.

ಈ ಬಗ್ಗೆ ವಿಸ್ಮಯ ತಂದೆ ವಿನೋದ್​ ಅವರು ಉಳ್ಳಾಲ ಪೊಲೀಸ್​ ಠಾಣೆಯಲ್ಲಿ ಅಪಹರಣ ದೂರು ದಾಖಲಿಸಿದ್ದರು. ಬಳಿಕ ವಿದ್ಯಾನಗರ ಠಾಣೆ ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿ, ಪೋಷಕರಿಗೆ ಒಪ್ಪಿಸಿದರು. ಬಳಿಕ ವಿನೋದ್​ ಮಂಗಳೂರಿನ ವಿಹೆಚ್​ಪಿ ನಾಯಕರನ್ನು ಭೇಟಿಯಾಗಿ, ಕ್ರಿಮಿನಲ್ ರೆಕಾರ್ಡ್ ಹೊಂದಿರುವ ಅಶ್ಫಾಕ್ ಎರಡು ತಿಂಗಳ ಪರಿಚಯದಲ್ಲೇ ವಿಸ್ಮಯಳನ್ನು ಮೈಂಡ್ ವಾಶ್ ಮಾಡಿದ್ದಾನೆ. ಕೇರಳದಲ್ಲಿ ವಿಸ್ಮಯಳನ್ನು ಮತಾಂತರಿಸಲು ಯತ್ನಿಸಿದ್ದಾನೆ. ನನ್ನ ಮಗಳನ್ನ ಉಳಿಸಿಕೊಡಿ ಎಂದು ಕಣ್ಣೀರು ಹಾಕಿದ್ದರು.

ನಂತರ ವಿಹೆಚ್​ಪಿ ನಾಯಕರು ವಿಸ್ಮಯಳನ್ನು ಮಂಗಳೂರಿನ ಕೌನ್ಸಿಲಿಂಗ್ ಕೇಂದ್ರದಲ್ಲಿರಿಸಿದ್ದರು. ಕೌನ್ಸಿಲಿಂಗ್ ಕೇಂದ್ರದಲ್ಲಿ ವಿಸ್ಮಯ, ಅಶ್ಫಾಕ್ ಜೊತೆಗೆ ತೆರಳುವುದಾಗಿ ಹೇಳುತ್ತಿದ್ದಳು. ಕಾನೂನು ಹೋರಾಟದ ಮೂಲಕ ಮಗಳನ್ನು ವಾಪಾಸ್ ಕರೆದುಕೊಂಡು ಬರುವುದಾಗಿ ವಿಹೆಚ್​ಪಿ ಮುಖಂಡರು ಭರವಸೆ ನೀಡಿದ್ದರು.

ಈ ನಡುವೆ ಅಶ್ಫಾಕ್ ಕೇರಳ ಹೈಕೋರ್ಟ್​​ಗೆ ಹೆಬಿಯಾಸ್ ಕಾರ್ಪಸ್ ಅರ್ಜಿ ಹಾಕಿದ್ದಾನು. ಈ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಾದ-ವಿವಾದ ನಡೆದಿದೆ. ಕೊನೆಗೆ ನ್ಯಾಯಾಲಯದ ಆದೇಶ ಆಶ್ಫಕ್​ ಪರವಾಗಿ ಬಂದಿದೆ. ಇದೀಗ, ಆಶ್ಫಕ್​ ವಿಸ್ಮಯಳನ್ನು ಇಸ್ಲಾಂಗೆ ಮತಾಂತರಿಸಿ, ವಿವಾಹವಾಗಿದ್ದಾನೆ. ತಂದೆ-ತಾಯಿ, ಹಿಂದೂ ಸಂಘಟನೆಗಳ ಹೋರಾಟದ ಬಳಿಕವೂ ವಿಸ್ಮಯ, ಆಶ್ಫಕನನ್ನು ವರಸಿದ್ದಾಳೆ. ಆಶ್ಫಕ್​ಗೆ ಇದು ಎರಡನೇ ಮದುವೆಯಾಗಿದೆ.