ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ಬೈಕ್​ಗೆ ಬೆಂಕಿ ಹಚ್ಚಿದ ಯುವಕ

ಬೆಂಗಳೂರು, ಆ.14: ವಿಧಾನಸೌಧದ ಸಮೀಪ ಎಲೆಕ್ಟ್ರಿಕ್ ಬೈಕ್‌ಗೆ ಮಾಲೀಕನೇ ಬೆಂಕಿ ಹಚ್ಚಿದ ಘಟನೆ ನಡೆದಿತ್ತು. ಬಾಕಿ ಹಣ ಪಾವತಿಸಲು ಆಗದಿದ್ದಕ್ಕೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿತ್ತು. ಆದರೆ, ಇದೀಗ ಘಟನೆಗೆ ಅಸಲಿ ಕಾರಣ ತಿಳಿದು ಬಂದಿದ್ದು, ಪೊಲೀಸರ ಮೇಲಿನ ಕೋಪಕ್ಕೆ ಯುವಕನೊಬ್ಬ ಬೈಕ್​ಗೆ ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಸದ್ಯ ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಬೆಂಕಿ ಹಚ್ಚಲು ಕಾರಣವೇನು?

ಚಳ್ಳಕೆರೆ ಮೂಲದ ಪೃತ್ವಿರಾಜ್ ಎಂಬ ಯುವಕ ಟ್ರಕ್ಕಿಂಗ್ ಹೋಗಿ ಮಿಸ್ಸಾಗಿದ್ದ. ಈ ಹಿನ್ನಲೆ ಗಾಬರಿಗೊಂಡ ಆತನ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಪೃಥ್ವಿ ತಾಯಿಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆ ನನ್ನ ತಾಯಿಯನ್ನು ಬೈದಿದ್ದಕ್ಕೆ ಬೇಸರಗೊಂಡ  ಪೃತ್ವಿರಾಜ್,  ವಿಧಾನಸೌಧದ ಮುಂದೆಯೇ ಬೈಕ್​ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾನೆ.