ಉಡುಪಿ: ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಉಡುಪಿ, ಆ.20: ಮೊಬೈಲ್ ಕೊಡದಿದ್ದಕ್ಕೆ ಬಾವಿಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಡುಪಿ ತಾಲೂಕಿನ ಹಿರಿಯಡ್ಕ ಗ್ರಾಮದಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಪ್ರಥಮೇಶ್(16) ಆತ್ಮಹತ್ಯೆಗೆ ಶರಣಾದ ಯುವಕ. ನಿನ್ನೆ(ಆ.19) ಮೃತ ವಿದ್ಯಾರ್ಥಿ ಪ್ರಥಮೇಶ್ ಮನೆಯಿಂದ ಕಾಣೆಯಾಗಿದ್ದ. ಇಂದು(ಮಂಗಳವಾರ) ಬೆಳಿಗ್ಗೆ ಕಾಲೇಜು ಸಮೀಪದ ಮನೆಯ ಬಾವಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ಕುರಿತು ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತ ಮಗನನ್ನು ಕಳೆದುಕೊಂಡ ಹೆತ್ತವರ ಗೋಳಾಟ ಮುಗಿಲುಮುಟ್ಟಿದೆ.