ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಜಾಥಾ

ಯಲ್ಲಾಪುರ: ತಾಲೂಕು ಕಾನೂನು ಸೇವಾ ಸಮಿತಿ ಮತ್ತು ತಾಲೂಕು ಪಂಚಾಯತ ಇವರ ಸಂಯುಕ್ತ ಆಶ್ರಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಜಾಥಾ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಸುರೇಶ ಹಳಕಾಯಿ ಜಾಥಾಕ್ಕೆ ಚಾಲನೆ ನೀಡಿದರು.

ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀಬಾಯಿ ಪಾಟೀಲ್,ವಕೀಲ ಸಂಘದ ಅಧ್ಯಕ್ಷ ಆರ್.ಕೆ.ಭಟ್ಟ, ಬಿಇಒ ಎನ್.ಆರ್.ಹೆಗಡೆ, ತಾ.ಪಂ ಇಒ ಜಗದೀಶ ಕಮ್ಮಾರ, ಸಹಾಯಕ ಸರ್ಕಾರಿ ಅಭಿಯೋಜಕಿ ಜೀನತ್ ಭಾನು ಶೇಖ್, ಹಿರಿಯ ನ್ಯಾಯವಾದಿ ವಿ.ಪಿ.ಭಟ್ಟ ಕಣ್ಣಿಮನೆ, ಎನ್.ಆರ್.ಭಟ್ ಮುಂತಾದವರು ಭಾಗವಹಿಸಿದ್ದರು.