ಹುಡ್ಗಿ ವಿಷ್ಯಕ್ಕೆ ರೂಮ್‌ನಲ್ಲಿ ಕೂಡಿ ಹಾಕಿ ಯುವಕನಿಗೆ ರಕ್ತ ಬರುವಂತೆ ಥಳಿತ

ಮಂಗಳೂರು: ಯುವಕನನ್ನು ಮನೆಯಲ್ಲಿ ಕೂಡಿ ಹಾಕಿ ಯದ್ವಾತದ್ವಾ ಹಲ್ಲೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಘಟನೆ ನಡೆದಿದೆ. ಯುವಕನಿಗೆ ಥಳಿಸುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬೊಳಂತೂರು ನಿವಾಸಿ ರಹೀಮ್ ಎಂಬಾತನ ಮೇಲೆ ಯುವಕರ ಗುಂಪು ಮಾರಣಾಂತಿಕ ಹಲ್ಲೆ ನಡೆದಿದೆ. ರಹೀಮ್‌ನನ್ನು ಎಲ್ಲಿ ಕರೆದುಕೊಂಡು ಹೋಗಿ ಹೊಡೆದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಪೊಲೀಸ್ ಮೂಲದ ಪ್ರಕಾರ ಪುತ್ತೂರು ಯುವಕರ ತಂಡದಿಂದ ಈ ಕೃತ್ಯ ನಡೆದಿದೆ. ಹುಡುಗಿ ವಿಚಾರಕ್ಕೆ ಕೂಡಿ ಹಾಕಿ ಥಳಿಸಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಜಿಲ್ಲೆಯ ಯಾವುದೇ ಠಾಣೆಯಲ್ಲಿ ದೂರು ದಾಖಲಾಗಿಲ್ಲ. ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಗಿದೆ ಎನ್ನಲಾಗಿದೆ.