ಪೋಷಕರಿಗೆ ಕ್ಷಮೆ ಕೋರಿ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ, ದೇಹದ ಅರ್ಧ ಭಾಗಕ್ಕೆ ಹುಡುಕಾಟ

ಬೆಂಗಳೂರು, ಆ.28: ಸಾಲಕ್ಕೆ ಹೆದರಿದ ಯುವಕನೊಬ್ಬ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಎಪಿಎಂಸಿ ಬಳಿ ನಡೆದಿದೆ. ದಾಸನಪುರದ ವಿಕ್ರಂ ಸಿಂಹ(28) ಮೃತ ವ್ಯಕ್ತಿ. ಅಪ್ಪ, ಅಮ್ಮನಿಗೆ ಕ್ಷಮೆ ಕೋರಿ ಡೆತ್ ನೋಟ್ ಬರೆದಿಟ್ಟು ಕೊನೆಯುಸಿರೆಳೆದಿದ್ದಾನೆ. ಇದೀಗ ಅರ್ಧದಷ್ಟು ಭಾಗ ಮಾತ್ರ ಪತ್ತೆಯಾಗಿದ್ದು, ಇನ್ನೂಳಿದ ಅರ್ಧ ಭಾಗಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.

ಇನ್ನು ಮೃತ ಯುವಕ ವಿಕ್ರಂ ಸಿಂಹ, ಐಡಿಎಫ್​ಸಿ ಬ್ಯಾಂಕ್​ನಲ್ಲಿ ಲೋನ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಮಾಡಿದ ಸಾಲಕ್ಕೆ ಬ್ಯಾಂಕ್ ಇಎಂಐ ಜೊತೆಗೆ ಸಾಲಗಾರರ ಕಿರುಕುಳದಿಂದಾಗಿ ಬೇಸತ್ತಿದ್ದ ವಿಕ್ರಂ, ಇಂದು(ಬುಧವಾರ) ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.