ವಾಕಿಂಗ್​ ಮಾಡ್ತಿದ್ದ ನಿವೃತ್ತ ಶಿಕ್ಷಕಿಯನ್ನು ಕಿತ್ತು ತಿಂದ ಬೀದಿ ನಾಯಿಗಳು

ಬೆಂಗಳೂರು, ಆ.28: ಬೆಂಗಳೂರಿನಲ್ಲಿ ಬೀದಿನಾಯಿಗಳ ದಾಳಿಗೆ ನಿವೃತ್ತ ಶಿಕ್ಷಕಿ ಬಲಿಯಾದ ಘಟನೆ ಬೆಂಗಳೂರಿನ ಜಾಲಹಳ್ಳಿಯ ವಾಯುಸೇನಾ ನೆಲೆಯ 7ನೇ ವಸತಿಗೃಹ ಕ್ಯಾಂಪಸ್​​ನಲ್ಲಿ ನಡೆದಿದೆ. ವಾಕಿಂಗ್​ ಮಾಡುತ್ತಿದ್ದಾಗ ರಾಜ್ದುಲಾರಿ ಸಿನ್ಹಾ(76) ಮೇಲೆ ಸುಮಾರು 10 ರಿಂದ 12 ಬೀದಿ ನಾಯಿಗಳು ದಾಳಿ ಮಾಡಿದ್ದವು. ಇದರಿಂದ ಗಂಭೀರ ಗಾಯಗೊಂಡಿದ್ದ ರಾಜ್ದುಲಾರಿ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ. ಈ ಕುರಿತು ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್​​ ದಾಖಲಾಗಿದೆ.