ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಅರೆಸ್ಟ್‌

ಉಡುಪಿ: ರೈಲಿನಲ್ಲಿ ಯುವತಿಯ ಮಾನಭಂಗ ಯತ್ನಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಭಟ್ಕಳ ಮೂಲದ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ ಆಗಿದ್ದಾನೆ. ಕಳೆದ ಭಾನುವಾರ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬೆಂಗಳೂರಿನಲ್ಲಿ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವತಿ ಮೂಲತಃ ಉಡುಪಿ ತಾಲೂಕಿನ ಮಣಿಪಾಲದವರು. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಉಡುಪಿಗೆ ಹೊರಟಿದ್ದರು.

ಭಾನುವಾರ ಮುಂಜಾನೆ ರೈಲು ಸಂಚರಿಸುತ್ತಿದ್ದಾಗಲೇ ಅಸಭ್ಯ ವರ್ತನೆ ತೋರುತ್ತಿದ್ದ. ಯುವತಿಯ ಖಾಸಗಿ ಅಂಗಗಳನ್ನು ಮುಟ್ಟಿ ಕಾಮಚೇಷ್ಠೆ ತೀರಿಸಿಕೊಳ್ಳುತ್ತಿದ್ದ. ಇನ್ನೇನು ಉಡುಪಿಗೆ ಅರ್ಧ ಗಂಟೆ ಇರುವಾಗ ಮಂಗಳೂರು ಹೊರವಲಯದ ಮುಲ್ಕಿ ಬಳಿ ಯುವತಿಯ ಮೇಲೆ ಎರಗಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಕೂಡಲೇ ಇದಕ್ಕೆ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಗಾಬರಿಗೊಂಡ ಶುರೈಂ ಕ್ಷಮೆಯಾಚಿಸಿದ್ದಾನೆ.

ಕೂಡಲೆ ಯುವತಿ ಆತನ ಫೋಟೊ ತೆಗೆದುಕೊಂಡಿದ್ದಾಳೆ. ಜತೆಗೆ ತಪ್ಪಿಸಿಕೊಂಡು ಹೋಗುತ್ತಿದ್ದವನನ್ನು ಸಹ ಪ್ರಯಾಣಿಕರು ಹಿಡಿದುಕೊಂಡಿದ್ದಾರೆ. ಕೂಡಲೇ ಘಟನೆ ಕುರಿತು ಯುವತಿ ಉಡುಪಿ ರೈಲ್ವೆ ಪೊಲೀಸ್‌ರಿಗೆ ಮಾಹಿತಿ ನೀಡಿದ್ದಾಳೆ. ರೈಲ್ವೆ ಮದದ್ ಆ್ಯಪ್ ಮೂಲಕವೂ ದೂರು ನೀಡಿದ್ದರು. ಯುವತಿ ಮಾಹಿತಿ ಆಧರಿಸಿ ಕೂಡಲೇ ಮಣಿಪಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.