ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಮೂವರು ಶಿಕ್ಷಕರು

ಕಾರವಾರ ಸೆ. 04 : ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರು ಸೇರಿ ರಾಜ್ಯದಿಂದ 31ಮಂದಿ ಶಿಕ್ಷಕರನ್ನ ಆಯ್ಕೆ ಮಾಡಲಾಗಿದ್ದು, ಅದರಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ಮೂವರು ಶಿಕ್ಷಕರು ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ರಾಮಚಂದ್ರ ಶೇಷಾಜಪ್ಪ ಕಲಾಲ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಜೋಗೇಶ್ವರ ಹಳ್ಳ ಮುಂಡಗೋಡ ಇವರು ರಾಜ್ಯಮಟ್ಟ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ. ಇವರೊಂದಿಗೆ ಭಟ್ಕಳ ತಾಲೂಕಿನ ಬೆಳಕೆ ಹೊನ್ನೆಮಡಿ ಸರಕಾರಿ ಹಿರಿಯ ಪ್ರಾಥಮಿ ಶಾಲೆಯ ರಾಘವೇಂದ್ರ ಎಸ್ ಮಡಿವಾಗಳ ಹಾಗೂ ಕುಮಟಾ ತಾಲೂಕಿನ ಹಿರೇಗುತ್ತಿ ಸರಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾಗಿರುವ ಮಹಾದೇವ ಬೊಮ್ಮು ಗೌಡ ಅವರು ಈ ಬಾರಿಯ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.