ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಆಸ್ಪತ್ರೆಯ ಕಿಟಗಿ, ಗಾಜು ಪುಡಿ ಪುಡಿ

ವಿಜಯಪುರ, ಸೆ.10: ವೈದ್ಯನೊಬ್ಬ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಶಿರನಾಳ ಆಯುಷ್ ಆರೋಗ್ಯ ಮಂದಿರದಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ರಂಪಾಟ ಮಾಡಿದ ಶಿರನಾಳ‌ ಗ್ರಾಮದ ಆಯುಷ್ ಆರೋಗ್ಯ ಮಂದಿರದ ವೈದ್ಯ ನಾರಾಯಣ ರಾಠೋಡ, ಹೆಲ್ತ್​ ಇನ್ಸ್ಪೆಕ್ಟರ್ ಆಫೀಸರ್ ಹುದ್ದೆಯಲ್ಲಿದ್ದಾರೆ. ಕುಡಿದ ನಶೆಯಲ್ಲಿ ಆಸ್ಪತ್ರೆಯ ಪೀಠೋಪಕರಣಗಳನ್ನು ಪುಡಿ ಮಾಡಿರುವ ವೈದ್ಯ ನಾರಾಯಣ ರಾಠೋಡ, ಮತ್ತಿನಲ್ಲಿ ಆಸ್ಪತ್ರೆಯಲ್ಲಿ ಬಿದ್ದು ಹೊರಳಾಡಿದ್ದಾನೆ.

ಈ‌ ಹಿಂದೆ ಇದೇ ರೀತಿ ಮಧ್ಯ ಸೇವಿಸಿದ ಆರೋಪದ ಮೇಲೆ ಅಮಾನತ್ತಾಗಿದ್ದ. ಇದೀಗ ಮತ್ತೆ ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ಇತ, ಮಹಿಳಾ ರೋಗಿಗಳು ಬಂದರೆ ಅವಾಚ್ಯವಾಗಿ ನಿಂದನೆ ಮಾಡೋ ಆರೋಪ ಕೇಳಿಬಂದಿದ್ದು, ವೈದ್ಯನನ್ನು ಅಮಾನತ್ತು ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.