ಚಿಕ್ಕಬಳ್ಳಾಪುರ: ಗಣೇಶನ ಮುಂದೆ ಡ್ಯಾನ್ಸ್​ ಮಾಡಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ

ಚಿಕ್ಕಬಳ್ಳಾಪುರ, ಸೆಪ್ಟೆಂಬರ್​ 11: ಗಣೇಶನ ಮುಂದೆ ಡ್ಯಾನ್ಸ್​ ಮಾಡಬೇಡ ಎಂದಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. ಗಿರೀಶ್ ​(21) ಮೃತ ದುರ್ದೈವಿ. ಗಣೇಶನ ಮುಂದೆ ಡ್ಯಾನ್ಸ್ ಮಾಡಬೇಡ ಮನೆಗೆ ಬರುವಂತೆ ಅಣ್ಣ ಮತ್ತು ಅಮ್ಮ ಹೇಳಿದ್ದಕ್ಕೆ ನೊಂದ ಗಿರೀಶ್​ ಗ್ರಾಮದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.