ಕಾರಿನ ಮೇಲೆ ಉರುಳಿ ಬಿದ್ದ ಟೊಮ್ಯಾಟೊ ತುಂಬಿದ ಲಾರಿ; ಮೂವರು ಸ್ಥಳದಲ್ಲೇ ದುರ್ಮರಣ

ಚಿಕ್ಕಬಳ್ಳಾಪುರ: ಕಾರಿನ ಮೇಲೆ ಟೊಮ್ಯಾಟೊ ಲಾರಿ ಉರುಳಿ ಬಿದ್ದ ಪರಿಣಾಮ ಮೂವರ ದುರ್ಮರಣ ಹೊಂದಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ವಾಪಸ್ಸಾಗುತಿದ್ದ ವೇಳೆ ಚಿತ್ತೂರು ತಿರುಪತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕಾರು ಚಾಲಕ ರಮೇಶ್, ಮಂಜುನಾಥ್, ಮುನಿವೆಂಕಟ ರೆಡ್ಡಿ ಮೃತ ದುರ್ದೈವಿಗಳು. ರಸ್ತೆ ಬದಿಯಲ್ಲಿದ್ದ ಕಾರಿನ ಮೇಲೆ ಲಾರಿ ಉರುಳಿದೆ.

ಅದೃಷ್ಟವಶಾತ್ ಕಾರಿನಲ್ಲಿದ್ದ ಚಿಕ್ಕಬಳ್ಳಾಪುರ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ತೇಜಸ್ ಎಂಬುವವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಲಾರಿ ಬಿದ್ದ ರಭಸಕ್ಕೆ ತೇಜಸ್‌ಗೂ ಗಾಯವಾಗಿದ್ದು, ಚಿಕ್ಕಬಳ್ಳಾಪುರದ ಜೀವನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆಯಿಂದಾಗಿ ಕೆಲಕಾಲ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿದೆ.