ಚಿತ್ರದುರ್ಗದಲ್ಲಿ ಹಾಡಹಗಲೇ ಮುಸ್ಲಿಂ ಬಾಲಕಿ ಕಿಡ್ನ್ಯಾಪ್‌ಗೆ ಯತ್ನ; ಸಿಕ್ಕಿ ಬಿದ್ದ ಅಪಹರಣಕೋರರಿಗೆ ಧರ್ಮದೇಟು

ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ಜ್ಞಾನ ಭಾರತಿ ಶಾಲೆ ಮುಂಭಾಗ ಹಾಡಹಗಲೇ ಮುಸ್ಲಿಂ ಬಾಲಕಿಯನ್ನು ಕಿಡ್ನ್ಯಾಪ್‌ಗೆ ಯತ್ನಿಸಲಾಗಿದೆ. ಕಿರಾತಕರಿಬ್ಬರು ಬಾಲಕಿಯನ್ನು ಎಳೆದೊಯ್ಯುವಾಗ ಕಿರುಚಾಡಿದ್ದಾಳೆ. ಇದರಿಂದ ಬೆದರಿದ ಇಬ್ಬರು ಬಾಲಕಿಯನ್ನು ಬಿಟ್ಟು ಎಸ್ಕೇಪ್‌ ಆಗಲು ಯತ್ನಿಸಿದ್ದಾರೆ. ಬಾಲಕಿ ಕಿರುಚಾಟ ಕೇಳಿದ ಸ್ಥಳೀಯರು ಕೂಡಲೇ ಓರ್ವನನ್ನು ಹಿಡಿದು ಥಳಿಸಿದ್ದಾರೆ.

ಟಗರುಹಟ್ಟಿಯ ಆರೋಪಿ ಪಾರ್ಥ ಎಂಬಾತನನ್ನು ಹಿಡಿದು ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಇತ್ತ ಸ್ಥಳದಲ್ಲೇ ಇದ್ದ ಬಾಲಕಿ ಚಪ್ಪಲಿ ಹಿಡಿದು ಮನಬಂದಂತೆ ಹೊಡೆದಿದ್ದಾಳೆ. ಬಳಿಕ ಆರೋಪಿಯನ್ನುಪೊಲೀಸರಿಗೆ ಒಪ್ಪಿಸಿದ್ದಾರೆ. 17 ವರ್ಷದ ಬಾಲಕಿಯನ್ನುಆರೋಪಿ ಆನಂದ್ ಮತ್ತು ಪಾರ್ಥ ಎಂಬುವವರಿಂದ ಕಿಡ್ನ್ಯಾಪ್‌ ನಡೆದಿದೆ.

ಸದ್ಯ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಿಡ್ನ್ಯಾಪ್‌ ಮಾಡಲು ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲಕಿಯಿಂದ ದೂರು ದಾಖಲಾಗಿದೆ. ಯಾಕಾಗಿ ಕಿಡ್ನ್ಯಾಪ್‌ ಮಾಡಲು ಯತ್ನಿಸಿದರು ಎಂಬುದು ತಿಳಿದುಬಂದಿದೆ.

ಹಾಡಹಗಲೇ ಬಾಲಕಿಯ ಅಪಹರಣಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ‌ ಠಾಣೆಗೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಆಗಮಿಸಿದರು. ಎಸ್ಪಿ ಸಮ್ಮುಖದಲ್ಲಿ‌ ಆರೋಪಿಯ ತೀವ್ರ ವಿಚಾರಣೆ ನಡೆದಿದೆ. ಘಟನೆ ಸಂಬಂಧ ಎಸ್ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ಪಡೆದರು.