ಗುರುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಾನಿಯಾದ ಮನೆಗೆ ಆರ್ ವಿ ದೇಶಪಾಂಡೆ ಭೇಟಿ

ದಾಂಡೇಲಿ: ನಗರದ ಹಳೆ ದಾಂಡೇಲಿಯ ಲಕ್ಷ್ಮೀಗುಡಿ ಹತ್ತಿರ ಗುರುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಾನಿಯಾದ ಮನೆಗೆ ಶಾಸಕ ಆರ್ ವಿ ದೇಶಪಾಂಡೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅವಘಡದಲ್ಲಿ ಸಂಪೂರ್ಣ ಸುಟ್ಟು ಭಸ್ಮವಾದ ಶಾಹಿನಾ ಖಾನ್ ಮತ್ತು ಫರಿದಾ ಕಲಾದಿಗಿ ಕುಟುಂಬಕ್ಕೆ ಸಾಂತ್ವನ ಹೇಳಿ, ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸರಸ್ವತಿ ರಜಪೂತ, ಉಪಾಧ್ಯಕ್ಷ ಸಂಜಯ ನಂದ್ಯಾಳಕ, ನಗರಸಭೆ ಸದಸ್ಯ ಅನಿಲ ರಾಯ್ಕರ್, ಕೀರ್ತಿ ಗಾಂವ್ಕರ್ ಮುಂತಾದವರಿದ್ದರು.