ಆಟದ ಮೈದಾನದ ಗೇಟ್‌ ಬಿದ್ದು ಬಾಲಕ ಸಾ* – ಪೋಷಕರಿಂದ ಪುತ್ರನ ನೇತ್ರದಾನ

ಬೆಂಗಳೂರು: ಆಟದ ಮೈದಾನದಲ್ಲಿ ಗೇಟ್‌ ಮುರಿದು ಮೈಮೇಲೆ ಬಿದ್ದು ಸಾವನ್ನಪ್ಪಿದ ಬಾಲಕನ ನೇತ್ರದಾನಕ್ಕೆ ಪೋಷಕರು ಮುಂದಾಗಿದ್ದಾರೆ. ಪುತ್ರನ ಸಾವಿನ ನೋವಿನಲ್ಲೂ ಪೋಷಕರು ಮಾನವೀಯತೆ ಮೆರೆದಿದ್ದಾರೆ.

ಮೃತ ನಿರಂಜನ್ ಕಣ್ಣುಗಳನ್ನು ಲಯನ್ಸ್ ಇಂಟರ್‌ನ್ಯಾಷನಲ್‌ ಐ ಬ್ಯಾಂಕ್‌ಗೆ ದಾನ ಮಾಡಲು ಆತನ ತಂದೆ ವಿಜಯ್ ಪವಾರ್ ಮುಂದಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿದ್ದು, ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರಿಸಲಾಗುವುದು.

ಮೃತ ಬಾಲಕನ ತಂದೆ ಸ್ನೇಹಿತ ಮಾತನಾಡಿ, ನಿರಂಜನ್‌ ಕಳೆದುಕೊಂಡು ಅವರ ತಂದೆ ದುಃಖದಲ್ಲಿದ್ದಾರೆ. ನಿನ್ನೆ ಸಚಿವ ದಿನೇಶ್‌ ಗುಂಡೂರಾವ್‌ ಅವರು ಬಾಲಕನ ಪೋಷಕರನ್ನು ಭೇಟಿ ಮಾಡಿ ಸಂತೈಸಿದ್ದಾರೆ. ನಾವು ನಿರಂಜನ್‌ನನ್ನು ಕಳೆದುಕೊಂಡಿದ್ದೇವೆ. ಬೇರೆಯವರಿಗೆ ಉಪಯೋಗವಾಗಲಿ ಎಂದು ಆತನ ಕಣ್ಣುಗಳನ್ನು ದಾನ ಮಾಡಲು ಬಾಲಕನ ಪೋಷಕರು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ.