ಈಜಲು ಹೋಗಿದ್ದ ವಿದ್ಯಾರ್ಥಿಗಳಿಬ್ಬರು ಕೆರೆಯಲ್ಲಿ ಮುಳುಗಿ ಸಾ**

ಬೈಂದೂರು : ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬೈಂದೂರಿನಲ್ಲಿ ಸಂಭವಿಸಿದೆ.

ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ತಾನು ಮೊಹಮ್ಮದ್ ಶಫಾನ್ (13) ಮೃತ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ. ಇವರಿಬ್ಬರು ಪರೀಕ್ಷೆ ಮುಗಿಸಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು ಎಂದು ಹೇಳಲಾಗುತ್ತಿದೆ.

ಇಬ್ಬರಿಗೂ ಸರಿಯಾಗಿ ಈಜಲು ಬರುತ್ತಿರಲಿಲ್ಲವಾದರೂ ಆಟವಾಡಲು ನೀರಿಗೆ ಇಳಿದಿದ್ದಾರೆ. ಮಳೆ ಹೆಚ್ಚಿದ್ದ ಕಾರಣ ಯಾರೂ ಗಮನ ಹರಿಸಲಿಲ್ಲ. ಯಡ್ತರೆ ಗ್ರಾಮದವರಾದ ಇವರು ಬೈಂದೂರಿನ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ಓದುತ್ತಿದ್ದರು.

ನಿನ್ನೆ ತಡರಾತ್ರಿವರೆಗೂ ಬೈಂದೂರು ಪೊಲೀಸರು ಹುಡುಕಾಟ ನಡೆಸಿದ್ದರು. ಸೇನೇಶ್ವರ ದೇಗುಲ ಹಿಂಬದಿಯ ಕೆರೆ ಸಮೀಪ ಸೈಕಲ್ ಸಿಕ್ಕಿತ್ತು. ಬಳಿಕ ಕೆರೆಯಲ್ಲಿ ಹುಡುಕಾಡಿದಾಗ ಇಬ್ಬರ ಮೃತದೇಹ ಪತ್ತೆಯಾಗಿದೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.