ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಭಾರತ ಮಾತೆಯ ಪೂಜನಾ ಕಾರ್ಯಕ್ರಮ

ಕುಮಟಾ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆ ಭಾರತ ಮಾತೆಯ ಪೂಜನಾ ಕಾರ್ಯಕ್ರಮ ಜರುಗಿತು. ಭಾರತಾಂಬೆಯ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪುಷ್ಪಾರ್ಚನೆ ಸಲ್ಲಿಸಿದರು.

ಈ ವೇಳೆ ಬಿಜೆಪಿ ಮಂಡಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಯುವ ಮೋರ್ಚಾ ಜಿಲ್ಲಾ ಪ್ರಭಾರಿ ಪ್ರೋ.ಎಂ.ಜಿ.ಭಟ್ಟ್, ಜಿಲ್ಲಾ ಸಂಚಾಲಕ ನಾಗರಾಜ ನಾಯಕ ತೊರ್ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ, ಹಿಂದುಳಿದ ಮೋರ್ಚಾ ತಾಲೂಕಾಧ್ಯಕ್ಷ ವಿಶ್ವನಾಥ ನಾಯ್ಕ, ಪುರಸಭಾ ಅಧ್ಯಕ್ಷೆ ಅನುರಾಧಾ ಬಾಳೇರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.