BREAKING NEWS: ಮೀನು ಹಿಡಿಯುತ್ತಿದ್ದ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ

ದಾಂಡೇಲಿ: ಮೀನು ಹಿಡಿಯುತ್ತಿದ್ದ ವ್ಯಕ್ತಿಯನ್ನು ಮೊಸಳೆ ಎಳೆದೊಯ್ದ ಘಟನೆ ತಾಲೂಕಿನ ವಿನಾಯಕ ನಗರದ ಅಲೈಡ್ ಬಳಿ ನಡೆದಿದೆ.

ಸುರೇಶ್ ವಸಂತ ತೇಲಿ (44) ಮೊಸಳೆ ದಾಳಿಗೊಳಗಾದ ವ್ಯಕ್ತಿಯಾಗಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಮತ್ತು ಪೊಲೀಸರು ಆಗಮಿಸಿ ಶೋಧಕಾರ್ಯ ನಡೆಸಲಾಗುತ್ತಿದ್ದು, ಡಿವೈಎಸ್ಪಿ ಕೆ. ಎಲ್. ಗಣೇಶ್ ಸ್ಥಳಕ್ಕಾಗಮಿಸಿದ್ದಾರೆ. ದಾಂಡೇಲಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.