682 ಪ್ರಕರಣಗಳು ಲೋಕ ಅದಾಲತ್ ನಲ್ಲಿ ಇತ್ಯರ್ಥ

ಸಿದ್ದಾಪುರ: ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್ ನಲ್ಲಿ 682 ಪ್ರಕರಣಗಳು ಇತ್ಯರ್ಥವಾಗಿವೆ.
ಶನಿವಾರ ನಡೆದ ಅದಾಲತನಲ್ಲಿ 31 ಸಿವಿಲ್ 651 ಕ್ರಿಮಿನಲ್ ಸೇರಿ ಒಟ್ಟು 682 ಪ್ರಕರಣಗಳು ಇತ್ಯರ್ಥಗೊಂಡಿದ್ದು, 47,85,619 ರೂ ಹಣ ವಸೂಲಾಗಿದೆ. 313 ವ್ಯಾಜ್ಯ ಪೂರ್ವ ಪ್ರಕರಣಗಳು ಇತ್ಯರ್ಥಗೊಂಡು 2,57,703 ರೂ ವಸೂಲಾಗಿದೆ.

ಸಹಕರಿಸಿದ ವಕೀಲರ ಸಂಘ, ಅಭಿಯೋಜನೆ ಇಲಾಖೆ , ಕಾನೂನು ಸೇವಾ ಸಮಿತಿ, ಪೊಲೀಸ್ ಇಲಾಖೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ, ಹೆಸ್ಕಾಂ ಅಧಿಕಾರಿಗಳು ಹಾಗೂ ನ್ಯಾಯಾಲಯದ ಸಿಬ್ಬಂದಿಗಳಿಗೆ ನ್ಯಾಯಾಧೀಶ ತಿಮ್ಮಯ್ಯ ಜಿ ಅಭಿನಂದನೆ ಸಲ್ಲಿಸಿದ್ದಾರೆ.