
ಕಾರವಾರ ಡಿಸೆಂಬರ್ 08 : : ಜೊಯಿಡಾ ತಾಲ್ಲೂಕಿನ ಗಣೇಶಗುಡಿ ಬಳಿ ಪ್ರವಾಸಿ ಬಸ್ ಪಲ್ಟಿ ಯಾದ ಘಟನೆ ನಡೆದಿದೆ. ಬಸ್ ಚಿತ್ರದುರ್ಗ ಜಿಲ್ಲೆಯ ಹೊಸನಗರದ ಸೇಂಟ್ ಅಂಟೋನಿ ಪ್ರೌಢ ಶಾಲಾ ವಿದ್ಯಾರ್ಥಿಗಳನ್ನು ಕರೆ ತಂದಿತ್ತು. ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ರಾಜ್ಯ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ.

40 ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳನ್ನು ಜೊಯಿಡಾ ಮತ್ತು ದಾಂಡೇಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.