ಕಂಟೇನರ್ ಲಾರಿ ಪಲ್ಟಿ: ಚಾಲಕ, ನಿರ್ವಾಹಕ ಅಪಾಯದಿಂದ ಪಾರು.!

ಯಲ್ಲಾಪುರ: ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಬಳಗಾರ ಕ್ರಾಸ್ ಬಳಿ ಭಾನುವಾರ ನಡೆದಿದೆ. ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಸಾಗುತ್ತಿದ್ದ ಖಾಲಿ ಲಾರಿ ಬಳಗಾರ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಗಟಾರದಲ್ಲಿ ಪಲ್ಟಿಯಾಗಿದೆ. ಲಾರಿಯ ಮುಂಭಾಗ ಧರೆಗೆ ಗುದ್ದಿ ಜಖಂಗೊಂಡಿದ್ದು, ಚಾಲಕ ಹಾಗೂ ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ.