ತ್ರಿವರ್ಣದಿಂದ ಕಂಗೊಳಿಸುತ್ತಿರುವ ಭಟ್ಕಳ ಪುರಸಭೆ ಕಾರ್ಯಾಲಯ.!

ಭಟ್ಕಳ: ಕೇಂದ್ರ ಸರ್ಕಾರದ ಆಜಾದಿ ಕಾ ಅಮೃತ್ ಮಹೋತ್ಸವ ಹಿನ್ನೆಲೆ ತಾಲೂಕಿನ ಪ್ರತಿ ಮನೆ ಮನೆಯಲ್ಲಿ ಆ.13 ಮುಂಜಾನೆಯಿಂದ ಆ.15 ರ ಸಂಜೆ ತನಕ ತ್ರಿವರ್ಣ ಧ್ವಜ ಹಾರಿಸಲಾಗುತ್ತಿದೆ.

ಅದೇ ರೀತಿ ಪ್ರತಿ ವರ್ಷ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತದೆ. ಅತ್ಯುತ್ತಮವಾಗಿ ವಿದ್ಯುತ್ ದೀಪಾಲಂಕಾರ ಮಾಡಿದ ಸರ್ಕಾರಿ ಕಚೇರಿಯನ್ನು ಗುರುತಿಸಿ, ಆ. 15 ರಂದು ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಹುಮಾನ ವಿತರಿಸಲಾಗುತ್ತದೆ.

ಇದರ ತಯಾರಿಯಾಗಿ ಭಟ್ಕಳ ಪುರಸಭೆ ಕಾರ್ಯಾಲಯ ಕಳೆದ ಎರಡು ದಿನಗಳಿಂದ ರಾತ್ರಿ ವೇಳೆ ತ್ರಿವರ್ಣ ಬಣ್ಣಗಳಿಂದ ಕಂಗೊಳಿಸುತ್ತಿದೆ. ಇದರಿಂದ ಪುರಸಭೆ ಕಟ್ಟಡದ ಸೌಂದರ್ಯ ಇನ್ನಷ್ಟು ಹೆಚ್ಚಾಗಿದ್ದು, ಜನರನ್ನು ಆಕರ್ಷಿಸಿದೆ.