ವಿಭಜನೆಯ ಭಯಾನಕ ಸ್ಮಾರಕ ದಿನದ ಪ್ರಯುಕ್ತ ಮೌನ ಮೆರವಣಿಗೆ.!

ಕುಮಟಾ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ಬಿಜಪಿ ಮಂಡಲದ ವತಿಯಿಂದ ವಿಭಜನ್ ವಿಭಿಷಿತ ಸ್ಮೃತಿ ಅಂಗವಾಗಿ ಪಟ್ಟಣದಲ್ಲಿ ಮೌನ ಮೆರವಣಿಗೆ ನಡೆಸಲಾಯಿತು.

ಪಟ್ಟಣದ ಮಾಸ್ತಿಕಟ್ಟೆ ವೃತ್ತದಿಂದ ಆರಂಭವಾದ ಮೌನ ಮೆರವಣಿಗೆಯು ಹಳೆ ಬಸ್ ನಿಲ್ದಾಣ ಮಾರ್ಗವಾಗಿ ಸಾಗಿ ದೇವರಹಕ್ಕಲ ಶಾಂತಿಕಾ ಪರಮೇಶ್ವರಿ ದೇವಾಲಯದಲ್ಲಿ ಮುಕ್ತಾಯಗೊಂಡಿತು.

ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಮಂಲಾಧ್ಯಕ್ಷ ಹೇಮಂತಕುಮಾರ ಗಾಂವಕರ, ಪುರಸಭಾ ಅಧ್ಯಕ್ಷೆ ಅನುರಾಧಾ ಬಾಳೇರಿ, ಡಾ.ಜಿ.ಜಿ.ಹೆಗಡೆ, ಜಿ.ಎಸ್.ಗುನಗಾ, ಪ್ರಶಾಂತ ನಾಯ್ಕ ಸೇರಿದಂತೆ 1೦೦ ಕ್ಕೂ ಅಧಿಕ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.