ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸಾಗಿಸಲು ‘ಪಂಚ ಪ್ರಾಣ’ಗಳನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ

ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸತತ 9 ನೇ ಬಾರಿ ರಾಷ್ಟ್ರಧ್ವಜಾರೋಹಣ ಮಾಡಿದರು. ಬಳಿಕ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು.

2047ರ ವೇಳೆಗೆ ಸ್ವಾತಂತ್ರ್ಯ ಹೋರಾಟಗಾರರ ಕನಸುಗಳನ್ನು ನನಸಾಗಿಸಲು ನಾಗರಿಕರು ಐದು ಪ್ರತಿಜ್ಞೆ ಕೈಗೊಳ್ಳಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ‘ಪಂಚಪ್ರಾಣ’ಗಳನ್ನು ಉಲ್ಲೇಖಿಸಿದ್ದಾರೆ.

  • ಅಭಿವೃದ್ಧಿ ಹೊಂದಿದ ಭಾರತದ ದೊಡ್ಡ ಸಂಕಲ್ಪದೊಂದಿಗೆ ಮುಂದುವರಿಯುವುದು.
  • ಗುಲಾಮಗಿರಿಯ ಸಂಕೇತವನ್ನು ಅಳಿಸಿ ಹಾಕುವುದು.
  • ನಮ್ಮ ಪರಂಪರೆ ಬಗ್ಗೆ ಹೆಮ್ಮೆ ಹೊಂದುವುದು.
  • ಏಕತೆಯ ಶಕ್ತಿ.
  • ನಮ್ಮ ಕರ್ತವ್ಯಗಳನ್ನು ನಿಭಾಯಿಸುವುದು.