ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿ

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಾರ್ಗೋಡು ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಬಲಿಯಾದ ಘಟನೆ ನಡೆದಿದೆ. ಆನಂದ್ ದೇವಾಡಿಗ (52) ಮೃತ ದುರ್ದೈವಿ. ಕಾಡಾನೆಯು ಸುಮಾರು ಅರ್ಧ ಕಿಲೋಮೀಟರ್ ದೂರ ಎಳೆದುಕೊಂಡು ಹೋಗಿರುವುದರಿಂದ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಆಗಮಿಸಿದ್ದಾರೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.